
ಬೆಂಗಳೂರು: ಮುಂಗಾರಿನ ಆರ್ಭಟ ಎಲೆಲ್ಲೂ ಜೋರಾಗಿದ್ದು ಮುಂದಿನ 48 ಗಂಟೆ ರಣಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಮತ್ತು ಮಲೆನಾಡು ಕರ್ನಾಟಕದಲ್ಲಿ ಮಾತ್ರವಲ್ಲದೆ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಭಾಗದಲ್ಲಿ ಕೂಡ ಮಳೆರಾಯ ಅಬ್ಬರಿಸಿದ್ದು ಎಲ್ಲೆಡೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ಈ ರೀತಿ ಪರಿಸ್ಥಿತಿ ಇರುವಾಗಲೆ ಹವಾಮಾನ ಇಲಾಖೆ ಮುಂದಿನ 48 ಗಂಟೆ ಕಾಲ ಅಂದ್ರೆ 2 ದಿನಗಳ ಕಾಲ ಭೀಕರ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ದಾವಣಗೆರೆ ಸೇರಿ ಮೈಸೂರು, ಮಂಡ್ಯ, ಚಿತ್ರದುರ್ಗ, ತುಮಕೂರು, ಕಲಬುರಗಿ, ಬೀದರ್, ಕೋಲಾರದಲ್ಲೂ ಮಳೆ ಅಬ್ಬರ ಗ್ಯಾರಂಟಿ ಆಗಿದೆ. ಬೆಂಗಳೂರಲ್ಲಿ, 3-4 ದಿನ ಕಾಲ ಮೋಡ ಕವಿದ ವಾತವರಣ ಇರಲಿದ್ದು. ಜುಲೈ 11, 12 ಹಾಗೂ 13 ರಂದು ಬಿರುಗಾಳಿ ಸಹಿತ ಭಾರೀ ಮಳೆ ಬೀಳುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ ಎಂದು ಮುನ್ಸೂಚನೆ ನೀಡಿ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
Poll (Public Option)

Post a comment
Log in to write reviews