2024-09-19 05:04:01

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹೋರ್ಡಿಂಗ್ ಕುಸಿದು 12 ಮಂದಿ ದಾರುಣ ಸಾವು, ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಣೆ

ಮುಂಬೈನ ಘಾಟ್ಕೋಪರ್ ಮತ್ತು ವಡಾಲಾದಲ್ಲಿ ಎರಡು ಪ್ರತ್ಯೇಕ ಘಟನೆ ಸಂಭವಿಸಿವೆ. ಕಳೆದ ಎರಡರಿಂದ ನಾಲ್ಕು ದಿನಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಬಿರುಗಾಳಿ ಸಮೇತ ಮಳೆ ಸುರಿದಿದೆ. ಘಾಟ್‌ಕೋಪರ್‌ನ ಪೆಟ್ರೋಲ್ ಪಂಪ್‌ನಲ್ಲಿ ದೊಡ್ಡ ಹೋರ್ಡಿಂಗ್ ಬಿದ್ದಿದ್ದರಿಂದ 100 ಜನರು ಈ ಹೋರ್ಡಿಂಗ್‌ ಅಡಿ ಸಿಲುಕಿಕೊಂಡಿದ್ದರು ಎಂದು ವರದಿಯಾಗಿದೆ. ಈ ಅವಘಡದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಸ್ಥಳಕ್ಕೆ ಆಗಮಿಸಿ ಘಟನೆಯ ಬಗ್ಗೆ ವಿಚಾರಿಸಿದ್ದಾರೆ. ಮೃತರ ಸಂಬಂಧಿಕರಿಗೆ ಸರ್ಕಾರ ಐದು ಲಕ್ಷ ರೂ ನೆರವು ನೀಡಲಿದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಾತನಾಡಿ, "ಈಗ 100 ಜನರು ಇದರಲ್ಲಿ ಸಿಲುಕಿರುವ ಬಗ್ಗೆ ಮಾಹಿತಿ ಇದೆ. 51 ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. 35 ರಿಂದ 40 ಜನರು ಇನ್ನೂ ಕೆಳಗೆ ಸಿಲುಕಿದ್ದಾರೆ. ಈ ಘಟನೆ ಅತ್ಯಂತ ದುರದೃಷ್ಟಕರ ಮತ್ತು ಘಟನೆಗೆ ಕಾರಣರಾದವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗುವುದು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆಯೇ ಅಥವಾ ಇಲ್ಲವೇ? ಎಂಬುದನ್ನು ತನಿಖೆ ನಡೆಸಲಾಗುವುದು" ಎಂದು ಹೇಳಿದ್ದಾರೆ.

ಇನ್ನೊಂದೆಡೆ ಮುಂಬೈನ ವಡಾಲಾದಲ್ಲಿ ಬೀಸಿದ ಬಿರುಗಾಳಿಯಿಂದಾಗಿ ಪಾರ್ಕಿಂಗ್‌ನ ಭಾಗ ಕುಸಿದಿದೆ. ಈ ಪಾರ್ಕಿಂಗ್ ಸ್ಥಳವು ಕುಸಿದಾಗ, ಕೆಳಗೆ ಅನೇಕ ಕಾರುಗಳು ಇದ್ದವು. ಈ ಭಾಗದ ಪಾರ್ಕಿಂಗ್ ಕುಸಿದು ಎಂಟರಿಂದ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿಯೂ ಹೊರ ಬಿದ್ದಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಮುಂಬೈನ ಸಿಯಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Post a comment

No Reviews