
ಆನೇಕಲ್: ಕಾರು ಹಾಗೂ ಎರಡು ಟಿಪ್ಪರ್ ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಕೋಲಾರ ಹೆದ್ದಾರಿಯ ಗೊಟ್ಟಿಪುರ ಗೇಟ್ ಬಳಿ ಇಂದು ಮುಂಜಾನೆ ಸಮಯದಲ್ಲಿ ಈ ಘಟನೆ ನಡೆದಿದೆ.
ಈ ಭೀಕರ ಅಪಘಾತದಿಂದ ಎರಡು ಲಾರಿಗಳ ನಡುವೆ ಕಾರು ಸಿಲುಕಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಹೊಸಕೋಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಹಿನ್ನೆಲೆ ಹೊಸಕೋಟೆ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹೊಸಕೋಟೆ ಸಂಚಾರಿ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ವಾಹನಗಳನ್ನು ಹೆದ್ದಾರಿಯಿಂದ ಪಕ್ಕಕ್ಕೆ ನಿಲ್ಲಿಸಿ ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿದ್ದಾರೆ. ಘಟನೆ ಸಂಬಂಧ ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
Poll (Public Option)

Post a comment
Log in to write reviews