2024-09-19 05:03:58

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಲಬೆರಕೆ ಮದ್ಯ ಸೇವಿಸಿ 30 ಮಂದಿ ಸಾವು, 60ಕ್ಕೂ ಹೆಚ್ಚು ಮಂದಿ ಅಸ್ವಸ್ಥ!

ಚೆನ್ನೈ: ಕಳ್ಳಭಟ್ಟಿ ಕುಡಿದು 30 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಅಸ್ವಸ್ಥರಿಗೆ ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಕ್ರಮ ಮದ್ಯ ಪ್ಯಾಕೆಟ್ ‘ಅರಕ್’ ಸೇವಿಸಿದ ಕಾರಣ ಈ ಪ್ರಕರಣ ನಡೆದಿದೆ ಎಂದು ಸ್ಥಳೀಯ ಅಧಿಕಾರಿಗಳು ಅಂದಾಜಿಸಿದ್ದು, ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆದೇಶಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, ಕಲಬೆರಕೆ ಮದ್ಯ ಸೇವಿಸಿ ಸಾವನ್ನಪ್ಪಿರುವ ಸುದ್ದಿ ಕೇಳಿ ಆಘಾತವಾಗಿದೆ. ಈ ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ಇದನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತೆ ಮತ್ತು ಸಮಾಜವನ್ನು ಹಾಳುಗೆಡುವ ಕೃತ್ಯಗಳಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಕೂಡಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿ.ಎಂ.ಸ್ಟಾಲಿನ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

Post a comment

No Reviews