2024-09-19 04:40:29

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಭೂಕುಸಿತದಲ್ಲಿ ಸಿಲುಕಿದ 7 ಕನ್ನಡಿಗರು ಸಾವು

ಚಾಮರಾಜನಗರ: ಕೇರಳದಲ್ಲಿ ಸೋಮವಾರ (ಜುಲೈ 29) ತಡರಾತ್ರಿ ಉಂಟಾಗಿರುವ ಭೂ ಕುಸಿತದಲ್ಲಿ ಒಟ್ಟು 7 ಮಂದಿ ಕನ್ನಡಿಗರು ಅಸುನೀಗಿದ್ದು, ಇದರಲ್ಲಿ ಐವರ ಶವಗಳು ಪತ್ತೆಯಾಗಿವೆ. ದುರಂತದಲ್ಲಿ‌ ಚಾಮರಾಜನಗರ ಮೂಲದ ನಾಲ್ವರು, ಮಂಡ್ಯ ಜಿಲ್ಲೆಯ ಮೂವರು ಸಾವನ್ನಪ್ಪಿರುವುದಾಗಿ ಗುಂಡ್ಲುಪೇಟೆ ತಹಶಿಲ್ದಾರ್ ರಮೇಶ್ ಬಾಬು ಮಾಧ್ಯಮದವರಿಗೆ ಖಚಿತಪಡಿಸಿದ್ದಾರೆ.

ದುರಂತ ಸ್ಥಳದಲ್ಲಿ ಮಂಗಳವಾರ ಕಾರ್ಯಾಚರಣೆ ವೇಳೆ ಚಾಮರಾಜನಗರದ ಪುಟ್ಟಸಿದ್ದಿ, ರಾಣಿ ಎಂಬವರ ಮೃತದೇಹಗಳು ಪತ್ತೆಯಾಗಿದ್ದವು. ಇಂದು ಬುಧವಾರ ಮಂಡ್ಯ ಮೂಲದ ಮೂವರ ಶವಗಳು ಪತ್ತೆಯಾಗಿವೆ. ಕಣ್ಮರೆಯಾಗಿದ್ದ ಮಳವಳ್ಳಿ ಮೂಲದ 9 ಮಂದಿಯಲ್ಲಿ ಸಾವಿತ್ರಿ ಎಂಬವರ ಮೊಮ್ಮಗ, ಸಬಿತಾ ಮಗ ಅಚ್ಚು ಹಾಗೂ ಶ್ರೀಕುಟ್ಟಿ ಎಂಬವರು ಮೃತಪಟ್ಟಿದ್ದಾರೆ. ವೈತ್ರಿ ಆಸ್ಪತ್ರೆಯಲ್ಲಿ ಇವರ ಶವಗಳನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು, ಚಾಮರಾಜನಗರ ತಾಲೂಕಿನ‌ ಇರಸವಾಡಿ ಮೂಲದ‌ ರಾಜನ್ ಮತ್ತು ರಜಿನಿ ದಂಪತಿ ಮೃತಪಟ್ಟಿದ್ದು, ಶವಗಳು ಪತ್ತೆಯಾಗಬೇಕಿದೆ. ಒಟ್ಟಾರೆಯಾಗಿ 7 ಮಂದಿ ಕನ್ನಡಿಗರು ಕೇರಳ ಭೂ ಕುಸಿತದಲ್ಲಿ ಪ್ರಾಣ ಕಳೆದುಕೊಂಡಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಕನ್ನಡಿಗರ ಪತ್ತೆ ಕಾರ್ಯ ತೀವ್ರ: ಕೇರಳ‌ ವಯನಾಡ್​ ಗುಡ್ಡ ಕುಸಿತ ಪ್ರಕರಣದಲ್ಲಿ ಸಿಲುಕಿರುವ ಕನ್ನಡಿಗರ ಗುರುತು ಪತ್ತೆ ಮತ್ತು ರಕ್ಷಣಾ ಕಾರ್ಯವನ್ನು ತೀವ್ರವಾಗಿ ನಡೆಸಲಾಗುತ್ತಿದೆ. ಆಸ್ಪತ್ರೆ ಮತ್ತು ಕಾಳಜಿ ಕೇಂದ್ರಗಳಿಗೆ ತಹಶಿಲ್ದಾರ್ ಗಳ ತಂಡಗಳು ಭೇಟಿ ನೀಡುತ್ತಿವೆ. ಚಾಮರಾಜನಗರ ತಹಶಿಲ್ದಾರ್ ಗಿರಿಜಮ್ಮ‌ ಮತ್ತು ಗುಂಡ್ಲುಪೇಟೆ ತಹಶಿಲ್ದಾರ್ ರಮೇಶ್ ಬಾಬು ತಂಡಗಳು ಪ್ರತ್ಯೇಕವಾಗಿ ವೈತ್ರಿ ತಾಲೂಕು ಕೇಂದ್ರ ಮತ್ತು ಇತರೆ ಕಡೆ ತೆರೆದಿರುವ ಕಾಳಜಿ ಕೇಂದ್ರಗಳು, ಆಸ್ಪತ್ರೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಚಾಮರಾಜನಗರ ಸೇರಿದಂತೆ ಕರ್ನಾಟಕದವರ ಗುರುತು ಪತ್ತೆ ಹಾಗೂ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದವರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಇದಕ್ಕಾಗಿ ಬತ್ತೇರಿಯಲ್ಲಿ ಎರಡು ಬಸ್​ಗಳನ್ನು ನಿಯೋಜನೆ ಮಾಡಲಾಗಿದೆ. ಸಂಜೆ ಹೊತ್ತಿಗೆ ಕನ್ನಡಿಗರನ್ನು ಕರೆತರುವ ನಿರೀಕ್ಷೆ ಇದ್ದು, ಎಲ್ಲರನ್ನೂ ಒಟ್ಟಿಗೆ ಕರೆತರಲು ನಿರಂತರ ಮಳೆ ಅಡ್ಡಿಯಾಗಿದೆ.

Post a comment

No Reviews