
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಯಾವುದೇ ಮಂತ್ರಿಗಳಿಗೆ ಜನರ ಸಮಸ್ಯೆ ಬಗೆಹರಿಸುವ ಮನಸ್ಸು ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಗರಣಗಳ ಸುತ್ತ ಗಿರಕಿ ಹೊಡೆಯುತ್ತಿದೆ. ಜನರ ಬಗ್ಗೆ ಇವರಿಗೆ ಕಿಂಚಿತ್ತೂ ಕಾಳಜಿ ಇಲ್ಲ, ಜನರ ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸುತ್ತಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆ ಹಿಂಗಾರು ಮಳೆ ನಿರೀಕ್ಷೆಗೂ ಮೀರಿ ಹೆಚ್ಚಾಗಿ ಬರುತ್ತಿದೆ. ಬೆಂಗಳೂರಲ್ಲಿ ಗುಂಡಿ ಮುಚ್ಚಿಲ್ಲ. ಮಳೆ ಹಾನಿ ನಿಯಂತ್ರಣಕ್ಕೆ ಸೂಕ್ತ ಸಿದ್ಧತೆ ನಡೆಸಿಲ್ಲ. ಬಹುತೇಕ ಭಾಗಗಳಲ್ಲಿ ಇದೆ ಪರಿಸ್ಥಿತಿ ಇದೆ ಎಂದು ಕಿಡಿಕಾರಿದರು.
Poll (Public Option)

Post a comment
Log in to write reviews