
ಬೆಂಗಳೂರು: ಕಾಡು ಪ್ರಾಣಿಗಳ ಬೇಟೆಗೆಂದು ನಾಡಬಾಂಬ್ ತಯಾರಿಸುವ ವೇಳೆ ಬಾಂಬ್ ಸ್ಟೋಟವಾಗಿರುವ ಘಟನೆ ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ನಡೆದಿದೆ.
ಇದೇ ಶುಕ್ರವಾರ ನಾಡಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ 19 ವರ್ಷದ ಯುವಕ ಮೃತಪಟ್ಟಿದ್ದು, ಆತನ ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ಯುವಕನನ್ನು ದೊಡ್ಡನಲ್ಲಾಳ ಗ್ರಾಮದ ಪವನ್(19) ಎಂದು ಗುರುತಿಸಲಾಗಿದೆ. ಸ್ಫೋಟದ ರಭಸಕ್ಕೆ ಮನೆಯ ಮೇಲ್ವಾವಣಿ ಛಿದ್ರ ಛಿದ್ರವಾಗಿದೆ.
ಕಾಡು ಪ್ರಾಣಿಗಳ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Poll (Public Option)

Post a comment
Log in to write reviews