
ಹಾಸನ: ಖಾಸಗಿ ವಸತಿ ಗೃಹದಲ್ಲಿ ಮುಖ್ಯ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಿಗ್ಗೆ 9 ಗಂಟೆಗೆ ನಗರದ ಬಿ.ಎಂ. ರಸ್ತೆ ಬಳಿ ಇರುವ ಗೋಕುಲ ವಸತಿ ಗೃಹದಲ್ಲಿ ನಡೆದಿದೆ.
ರಂಗಸ್ವಾಮಿ (57) ಆತ್ಮಹತ್ಯೆ ಮಾಡಿಕೊಂಡ ಮುಖ್ಯೋಪಾಧ್ಯಾಯ. ನಗರದ ಹೌಸಿಂಗ್ ಬೋರ್ಡ್ನಲ್ಲಿ ವಾಸವಾಗಿರುವ ಇವರು, ಬೇಲೂರು ತಾಲೂಕು ತೊಳಲು ಗ್ರಾಮದ ಸರಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು.
ಭಾನುವಾರ ಬೆಳಗ್ಗೆ ತಮ್ಮ ಕುಟುಂಬದೊಂದಿಗೆ ಮೊಬೈಲ್ ಕರೆ ಮೂಲಕ ಮಾತನಾಡಿದ್ದಾರೆ. ನಂತರದಲ್ಲಿ ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಈ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ, ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Poll (Public Option)

Post a comment
Log in to write reviews