2024-09-19 04:35:56

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಮೃತ ಯುವಕನನ್ನು ಚಿಂತಾಮಣಿ ತಾಲೂಕಿನ ಸೀತರಾಮಪುರ ಗ್ರಾಮದ ನವೀನ್ (22) ಹಾಗೂ ಅದೇ ಗ್ರಾಮದ ವಂದನ (16) ಮೃತ ಪ್ರೇಮಿಗಳು ಎಂದು ತಿಳಿದು ಬಂದಿದೆ.

ಗ್ರಾಮದ ನವೀನ್ ಡ್ರೈವರ್ ಕೆಲಸವನ್ನು ಮಾಡುತ್ತಿದ್ದು ತಮ್ಮದೇ ಸಮುದಾಯದ ವಂದನ ಜೊತೆ ಪ್ರೀತಿಯಲ್ಲಿದ್ದರು. ಇದೇ ವಿಚಾರ ಪೋಷಕರ ಗಮನಕ್ಕೆ ಬಂದು ಮಾರ್ಚ್‌ 30 ರಂದು ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ದಾಖಲಿಸಿದ್ದರು. ಇನ್ನೂ ಅದರಂತೆ ಪೊಲೀಸರು ಪೋಕ್ಸೋ ಕೇಸ್ ಅಡಿ ದೂರು ದಾಖಲಿಸಿಕೊಂಡು ಬಾಲಕಿಯನ್ನು ಸಾಂತ್ವಾನ ಕೇಂದ್ರಕ್ಕೆ ರವಾನಿಸಿದ್ದರು.

ಕಳೆದ ದಿನವಷ್ಟೇ ಇಬ್ಬರು ಒಂದು ಕಡೆ ಸೇರಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧಾರ ಮಾಡಲಾಗಿದ್ದು, ಅದರಂತೆ ಶಿಡ್ಲಘಟ್ಟ ತಾಲೂಕು ವ್ಯಾಪ್ತಿಯ ಬೀರಪ್ಪನಹಳ್ಳಿ ಗ್ರಾಮದ ಅರಣ್ಯ ಪ್ರದೇಶಕ್ಕೆ ಹೋಗಿ ಕಳೆದ ಸೆ.13 ರ ಸಂಜೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ ಎನ್ನಲಾಗಿದೆ.

ಇನ್ನೂ ಘಟನೆಗೆ ಸಂಬಂಧಿಸಿದಂತೆ ಇಂದು ಗ್ರಾಮಸ್ಥರು ಇಬ್ಬರನ್ನು ನೋಡಿ ಪೊಲೀಸರಿಗೆ ಮಾಹಿತಿಯನ್ನು ಮುಟ್ಟಿಸಿದ್ದಾರೆ. ಅದರಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ನಗರದ ಸಾರ್ವಜನಿಕ ಶವಗಾರಕ್ಕೆ ರವಾನಿಸಿದ್ದಾರೆ.

ಸದ್ಯ ಶಿಡ್ಲಘಟ್ಟ ಗ್ರಾಮಾಂತರ ಠಾಣೆಗೆ ಬಾಲಕಿ ಹಾಗೂ ಯುವಕನ ಪೋಷಕರು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿದ್ದು ಅದರಂತೆ ಪೊಲೀಸರು ಇದು ಆತ್ಮಹತ್ಯೆಯೋ ಅಥವಾ ಬೇರೆ ಕಾರಣ ಇರಬಹುದಾ ಎಂದು ತನಿಖೆಯನ್ನು ಶುರುಮಾಡಿದ್ದಾರೆ.


Post a comment

No Reviews