2024-09-19 05:04:10

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾರು ಮತ್ತು ಎರಡು ಬೈಕ್​ಗಳ ಮಧ್ಯೆ ಭೀಕರ ಅಪಘಾತ: 6 ಮಂದಿ ಸಾವು

ಅನುಪ್‌ಗರ್: ರಾಜಸ್ಥಾನದ ಅನುಪಗರ್​ ಜಿಲ್ಲೆಯಲ್ಲಿ ಕಾರು ಮತ್ತು ಎರಡು ಬೈಕ್​ಗಳ ಮಧ್ಯೆ ಭೀಕರ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಯುವಕರು ಸಾವನ್ನಪ್ಪಿದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಕಾರು ಮತ್ತು ಬೈಕ್​ಗಳು ಸಂಪೂರ್ಣವಾಗಿ ಜಖಂ ಆಗಿವೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಭಜನಾ ಹಾಡು ಕೇಳಿದ ನಂತರ ಆರು ಜನ ಯುವಕರು ಎರಡು ಬೈಕ್‌ಗಳಲ್ಲಿ ತಮ್ಮ ಗ್ರಾಮ ಬಖ್ತಾವರಪುರಕ್ಕೆ ಹಿಂತಿರುಗುತ್ತಿದ್ದರು. ಈ ವೇಳೆ ಪುಲ್ಲಿ 25ರ ಬಳಿ ಕಾರೊಂದು ಅವರಿಗೆ ಡಿಕ್ಕಿ ಹೊಡೆದಿದ್ದು, ಬುಧವಾರ ತಡರಾತ್ರಿ 1.30ರಿಂದ 2 ಗಂಟೆ ಸುಮಾರಿಗೆ ನಡೆದಿದೆ. ಅಪಘಾತದ ತೀವ್ರತೆಗೆ ಆರು ಜನ ಯುವಕರು ಸಾವನ್ನಪ್ಪಿದ್ದಾರೆ ಎಂದು ಶ್ರೀವಿಜಯನಗರ ಎಸ್‌ಎಚ್‌ಒ ಗೋವಿಂದ್ ಬಿಷ್ಣೋಯ್ ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಯುವಕರನ್ನು ಆಂಬ್ಯುಲೆನ್ಸ್ ಸಹಾಯದಿಂದ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಗಂಗಾನಗರದ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟರು ಎಂದು ವೈದ್ಯರು ಘೋಷಿಸಿದ್ದಾರೆ.

ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ. ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಯುವಕರೆಲ್ಲರೂ ಮದ್ಯದಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

 

 

Post a comment

No Reviews