2024-09-19 09:07:32

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೇಜ್ರಿವಾಲ್ ಉತ್ತರಾಧಿಕಾರಿಯಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಆತಿಶಿ ಆಯ್ಕೆ

ನವದೆಹಲಿ ಅರವಿಂದ್​ ಕೇಜ್ರಿವಾಲ್​ ಉತ್ತರಾಧಿಕಾರಿಯಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಆತಿಶಿ ಅವರನ್ನು ಇಂದು ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಆತಿಶಿ ಅವರು ಕೇಜ್ರಿವಾಲ್ ಅವರ ಆಪ್ತ ಮತ್ತು ನಂಬಿಕಸ್ಥರಾಗಿ  ಗುರುತಿಸಿಕೊಂಡವರು. ಶಿಕ್ಷಣ, ಇಂಧನ, ಪಿಡಬ್ಲೂಡಿ ಸೇರಿದಂತೆ ಹಲವು ಪ್ರಬಲ ಖಾತೆಗಳನ್ನು ಇವರು ಹೊಂದಿದ್ದಾರೆ.

ಸೋಮವಾರ ರಾತ್ರಿ ಕೇಜ್ರಿವಾಲ್​ ನಿವಾಸದಲ್ಲಿ ನಡೆದ ಎಎಪಿಯ ರಾಜಕೀಯ ವ್ಯವಹಾರ ಸಮಿತಿ (ಪ್ಯಾಕ್​) ಸಭೆಯಲ್ಲಿ ಆತಿಶಿ ಹೆಸರು ಪ್ರಸ್ತಾಪಿಸಲಾಗಿದ್ದು, ಪಕ್ಷದ ಸದಸ್ಯರು ಸಹಮತ ಸೂಚಿಸಿದ್ದರು ಎನ್ನನಾಗಿತ್ತು.

ಅಬಕಾರಿ ನೀತಿ ಹಗರಣದಲ್ಲಿ ಸಿಲುಕಿ ಷರತ್ತುಬದ್ದ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಬಿಡುಗಡೆಯಾಗಿರುವ ಕೇಜ್ರಿವಾಲ್ ಶುಕ್ರವಾರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಘೋಷಿಸಿದ್ದರು. ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಜನ್ಮದಿನದಂದು ಸಿಎಂ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.

ಇಂದು ಸಂಜೆ ಅವರು ಲೆಫ್ಟಿನೆಂಟ್ ಗವರ್ನರ್‌ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ.

Post a comment

No Reviews