2024-09-19 09:04:38

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪೊಲೀಸ್‌ ಕಸ್ಟಡಿಯಲ್ಲಿ ಇದ್ದ ಆರೊಪಿ ಸಾವು: ಉದ್ರಿಕ್ತ ಗೊಂಡ ಜನ

ದಾವಣಗೆರೆ: ಪೊಲೀಸ್‌ ಕಸ್ಟಡಿಯಲ್ಲಿ ಇದ್ದ ಆರೋಪಿ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕಸ್ಟಡಿಯಲ್ಲಿ ಇದ್ದ ಆರೊಪಿ ಸಾವು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ, ಆಕ್ರೋಶಗೊಂಡ ಜನರು ಶನಿವಾರ ಮುಂಜಾನೆ ಪೊಲೀಸ್‌ ಠಾಣೆಯ ಆವರಣವನ್ನ ಧ್ವಂಸಗೊಳಿಸಿದ್ದಾರೆ ಮತ್ತು ಹಲವಾರು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದರು.
30 ವರ್ಷದ ಆದಿಲ್ ನನ್ನು ಪೊಲೀಸರು ಜೂಜಿನ ಚಟುವಟಿಕೆಯಲ್ಲಿ ಶಾಮೀಲಾಗಿದ್ದ ಎಂದು ಆತನ್ನ ಬಂಧಿಸಲಾಗಿತ್ತು. ಆದರೆ ನಿನ್ನೆ ರಾತ್ರಿ 30 ವರ್ಷದ ಆದಿಲ್ ಸಾವನ್ನಪ್ಪಿದ್ದಾನೆ. ಪೊಲೀಸರು ಆದಿಲ್ ಮರಣೋತ್ತರ ಪರೀಕ್ಷೆ ನಡೆಸಿ ವರದಿ ಬಂದ ನಂತರ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. 
ಅವರ ಸಾವಿನ ಹಿಂದಿನ ಕಾರಣದ ಬಗ್ಗೆ ಇನ್ನೂ ಸರಿಯಾದ ಮಾಹಿತಿ ಸಿಕ್ಕಿಲ್ಲ. ಆದಿಲ್ ಕೇವಲ 5-6 ನಿಮಿಷಗಳ ಕಾಲ ಪೊಲೀಸ್ ಲಾಕ್‌ಅಪ್‌ನಲ್ಲಿದ್ದ ಎಂದು ಪೊಲೀಸರು ಹೇಳುತ್ತಾರೆ. ಪೊಲೀಸರು ಆದಿಲ್ ಬಿಪಿ ಕಡಿಮೆಯಾಗಿದ್ದರಿಂದಾಗಿ ಮರಣಹೊಂದಿರಬಹುದೆಂದು ಶಂಕಿಸಿದ್ದಾರೆ. ಆದಾಗ್ಯೂ, ಅವರು ಮರಣೋತ್ತರ ಪರೀಕ್ಷೆಯ ಫಲಿತಾಂಶಗಳಿಗಾಗಿ ಕಾಯುತ್ತಿದ್ದಾರೆ.

Post a comment

No Reviews