2024-09-19 04:32:53

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಹಿಂದ ಪ್ರತಿಭಟನೆ: ಫ್ರೀಡಂ ಪಾರ್ಕ್​​ ಸುತ್ತಮುತ್ತ ಸಂಚಾರ ದಟ್ಟಣೆ, ಬದಲಿ ಮಾರ್ಗಕ್ಕೆ ಸೂಚನೆ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗಾಗಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಅನುಮತಿ ನೀಡಿದ್ದಾರೆ.  ಈ ನಡೆಯನ್ನು ಖಂಡಿಸಿ ಅಂಹಿಂದ ಸಮುದಾಯ ಮಂಗಳವಾರ ಪ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದೆ.

ಸಮಾವೇಶ ಬಳಿಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ರಾಜಭವನ ಚಲೋ ಕರೆ ನೀಡಿದೆ. ಇದರಿಂದ ಫ್ರೀಡಂ ಪಾರ್ಕ್​ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗಲಿದೆ. ಹೀಗಾಗಿ ಸುಗಮ ಸಂಚಾರಕ್ಕಾಗಿ ಬೆಂಗಳೂರು ಸಂಚಾರಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.

ಸಂಚಾರಿ ಪೊಲೀಸರ ಮಾರ್ಗಸೂಚಿ

ಬೆಂಗಳೂರು ನಗರ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಫ್ರೀಡಂ ಪಾರ್ಕ್​​ನಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವತಿಯಿಂದ ಪ್ರತಿಭಟನೆ ಮತ್ತು ರಾಜಭವನ ಚಲೋ ನಡೆಸಲಿದೆ. ಈ ಪ್ರತಿಭಟನೆಗೆ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಪ್ರತಿಭಟನಾಕಾರರು ಬರುತ್ತಿದ್ದಾರೆ, ಹೀಗಾಗಿ ಫ್ರೀಡಂ ಪಾರ್ಕ್ ಸುತ್ತಮುತ್ತ ಭಾರಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಈ ಪ್ರತಿಭಟನೆ ಸಮಯದಲ್ಲಿ ಜನ ದಟ್ಟನೆ ತಡೆಯಲು ಈ ಕೆಳಕಂಡ ಸಂಚಾರ ಮಾರ್ಪಾಟು ಮಾಡಲಾಗಿದೆ.

ಸಾಂಚಾರ ಮಾರ್ಪಾಡು

*ಕೋಡೆ ಸರ್ಕಲ್ ನಿಂದ ಫ್ರೀಡಂ ಪಾರ್ಕ್ ಜಂಕ್ಷನ್ ವರೆಗೆ (ಶೇಷಾದ್ರಿ ರಸ್ತೆ) ವರೆಗೆ ಭಾರಿ ಸಂಚಾರ ದಟ್ಟಣೆ ಉಂಟಾಗುವುದರಿಂದ ಪರ್ಯಾಯ ಮಾರ್ಗವನ್ನು ಸಾರ್ವಜನಿಕರು ಬಳಸಬೇಕು.

*ಇಂದು ಕೆ.ಪಿ.ಎಸ್.ಸಿ ಪರೀಕ್ಷೆ ಇರುವುದರಿಂದ, ಪರಿಕ್ಷಾರ್ತಿಗಳು ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಬೇಕು.

*ಪ್ರತಿಭಟನೆಗೆ ಬರುವ ಬಸ್ಸುಗಳು ಮೇಘ್ರವೃತ್ತದ ಬಳಿಯ ಅರಮನೆ ಮೈದಾನದ ಗೇಟ್ ನಂ. 1, 2 ಮತ್ತು 3 ರಲ್ಲಿ ನಿಲುಗಡೆ ಮಾಡಬೇಕು ಎಂದು ಸಚಿಸಲಾಗಿದೆ.

*ಪ್ರತಿಭಟನೆಗೆ ಬರುವ ಕಾರು. ದ್ವಿಚಕ್ರ ವಾಹನಗಳನ್ನು ಫ್ರೀಡಂ ಪಾರ್ಕ್​​ನಲ್ಲಿರುವ ಎಂಎಲ್​ಸಿಪಿ ಪಾರ್ಕಿಂಗ್ ಜಾಗದಲ್ಲಿ ಪಾವತಿ ಆಧಾರದ ಮೇಲೆ ನಿಲ್ಲಿಸಬೇಕು ಎಂದು ಸೂಚಿಸಿದ್ದಾರೆ.

 

Post a comment

No Reviews