2024-09-19 05:02:52

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಿಲಾಡಿ ಕಳ್ಳರ ಬಂಧನ

ಬೆಂಗಳೂರಿನಲ್ಲಿ ಬೈಕ್ ಕಳ್ಳರ ಬಂಧನವಾಗಿದೆ. ಗಿರಿ ನಗರ ಪೊಲೀಸರು ನವೀನ್, ತರುಣ್ ಎಂಬ ಕಿಲಾಡಿ ಕಳ್ಳರನ್ನು ಬಂಧಿಸಿದ್ದಾರೆ. ನಗರದಲ್ಲಿ ಮಳೆ ಬರುವ ವೇಳೆ ಬೈಕ್ ಕಳ್ಳತನ ಮಾಡಿ ಇವರು ಪರಾರಿಯಾಗುತ್ತಿದ್ದರು. ರಾತ್ರಿವೇಳೆಯಲ್ಲಿ ಭಾರೀ ಮಳೆಯಾಗುತ್ತಿದ್ದಾಗ ಜನರು ಮನೆಯಿಂದ ಹೊರಬರುವುದಿಲ್ಲ ಎಂದು ಖಚಿತ ಪಡಿಸಿಕೊಂಡು ಬೈಕ್ ಕಳ್ಳತನ ಮಾಡುತ್ತಿದ್ದರು. ರಾತ್ರಿ ಹೊತ್ತು ಮನೆ ಹೊರಗಡೆ ನಿಲ್ಲಿಸುತ್ತಿದ್ದ ಬೈಕ್‌ಗಳೇ ಇವರ ಟಾರ್ಗೆಟ್ ಆಗಿತ್ತು. ಗಿರಿ ನಗರ ಹನುಮಂತನಗರ ಬಸವನ ಗುಡಿ ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚಿಗೆ ಹತ್ತಾರು ಬೈಕ್ ಕಳ್ಳತನದ ಬಗ್ಗೆ ದೂರು ದಾಖಲಾಗಿತ್ತು. ಜನರು ಕೂಡ ಪೊಲೀಸರ ಮೇಲೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕಳ್ಳರ ವಿರುದ್ಧ ಕಾರ್ಯಾಚರಣೆಗೆ ಇಳಿದ ಗಿರಿನಗರ ಪೊಲೀಸರು CCTV ದೃಶ್ಯಾವಳಿ ಆಧಾರದ ಮೇಲೆ ತನಿಖೆ ಕೈಗೊಂಡು ಆರೋಪಿಗಳನ್ನ ಬಂಧಿಸಿದ್ದಾರೆ. ಬಂದಿತರಿಂದ 7ಲಕ್ಷ ಮೌಲ್ಯದ 11 ಬೈಕ್‌ಗಳನ್ನು ಜಪ್ತಿ ಮಾಡಿರುವ ಪೊಲೀಸರು ಕಳ್ಳರನ್ನು ಪರಪ್ಪನ ಅಗ್ರಹಾರಕ್ಕೆ ದೂಡಿದ್ದಾರೆ.

Post a comment

No Reviews