
ರಾಮನಗರ: ತೈಲ ಬೆಲೆ ಹೆಚ್ಚಳ ಹಿನ್ನೆಲೆ ದರ ಹೆಚ್ಚಿಸುವಂತೆ ಕರ್ನಾಟಕದಲ್ಲಿ ಆಟೋ, ಟ್ಯಾಕ್ಸಿ ದರ ಹೆಚ್ಚಳಕ್ಕೆ ಸಂಘಟನೆಗಳು ಮನವಿ ಮಾಡಿದ್ದಾರೆ. ಅವರು ಹೇಳಿದಂತೆ ದರ ಹೆಚ್ಚಿಸಲ್ಲ, ಆದರೆ ಈ ಬಗ್ಗೆ ಒಂದು ನಿರ್ಣಯ ಮಾಡುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಜಿಲ್ಲೆಯ ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ನೌಕರರಿಗೆ ಸಂಬಳ ನೀಡಬೇಕೆಂದರೆ ತೆರಿಗೆ ಅನಿವಾರ್ಯ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರ 3ರೂ ಹೆಚ್ಚಿಸಿದ್ದು ನಿಜ. ಏಕೆಂದರೆ ಸರ್ಕಾರಿ ಕೆಲಸಗಳು ನಡೆಯಬೇಕು. ಸರ್ಕಾರಿ ನೌಕರರಿಗೆ ವೇತನ ಕೊಡಬೇಕೆಂದರೆ ತೆರಿಗೆ ಅನಿವಾರ್ಯ. ಆದರೆ ಕೇಂದ್ರ ಸರ್ಕಾರದಂತೆ ತೈಲ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಿಸಿಲ್ಲ. ಕೇಂದ್ರ 400 ರೂ. ಗ್ಯಾಸ್ಅನ್ನು ಒಂದು ಸಾವಿರ ರೂ. ಮಾಡಿದೆ ಎಂದು ಕಿಡಿಕಾರಿದ್ದಾರೆ.
Poll (Public Option)

Post a comment
Log in to write reviews