
ರಾಯಚೂರು: ಯುವಕ ಒರ್ವನ ಬರ್ಬರ ಹತ್ಯೆಯಾಗಿರುವ ಘಟನೆ ನಗರದ ತೀನ್ ಕಂದಿಲ್ ಬಳಿ ದರ್ಘಟನೆ ಭಾನುವಾರ ರಾತ್ರಿ ನಡೆದಿದೆ.
ಮೃತ ಯುವಕ ಸಮೀರ್(24) ಅಲಿಯಾಸ್ ಕಿಂಗ್ ಕಾಂಗ್ ಎಂದು ತಿಳಿದಿದ್ದು. ಅಮನ್ ಕೊಲೆ ಮಾಡಿದ ಆರೋಪಿ. ಆರೋಪಿ ಅಮನ್ ಚಾಕುವಿನಿಂದ ಸಮೀರ್ಗೆ ಇರಿದಿದ್ದು, ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಬೆಳಗ್ಗೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೊಲೆಗೆ ಹಳೆ ವೈಷಮ್ಯ ಕಾರಣವೆಂದು ಹೇಳಲಾಗುತ್ತಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಸದರ್ಬಜಾರ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಾಕುವಿನಿಂದ ಇರಿದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Poll (Public Option)

Post a comment
Log in to write reviews