2024-09-19 05:01:08

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಮೈಕ್ರೋ ಪ್ಲಾನ್

ಬೆಂಗಳೂರು: ನಗರದಲ್ಲಿ ಸಮಗ್ರ ಮೈಕ್ರೋ ಪ್ಲಾನ್ ಮಾಡಿಕೊಂಡು ಅದರ ಪ್ರಕಾರ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಬೇಕು ಎಂದು ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಿಸುವ ನಿಟ್ಟಿನಲ್ಲಿ ವಲಯವಾರು ಡ್ರೈ ಡೇ ನಡೆಸಲಾಗುತ್ತಿದ್ದು, ಅದರ ಅಂಗವಾಗಿ ಪೂರ್ವ ವಲಯ ಸಿವಿ ರಾಮನ್ ನಗರದ ಜಿಎಂ ಪಾಳ್ಯ ಹಾಗೂ ನ್ಯೂ ತಿಪ್ಪಸಂದ್ರ ವ್ಯಾಪ್ತಿಯಲ್ಲಿ ಮನೆ-ಮನೆಗೆ ಭೇಟಿ ನೀಡಿ ನಾಗರಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ತುಷಾರ್ ಗಿರಿನಾಥ್, ಈಡೀಸ್ ಈಜಿಪ್ಟೈ ಎಂಬ ಸೊಳ್ಳೆಗಳಿಂದ ಹರಡುತ್ತದೆ. ಆದ್ದರಿಂದ ನೀರಿನ ಸಂಪ್, ಡ್ರಮ್, ಕೊಳಾಯಿ ಬಳಿ, ಹೂವಿನ ಕುಂಡ ಸೇರಿದಂತೆ ಇನ್ನಿತರ ಕಡೆ ಪರಿಶೀಲಿಸಿ ವಾರಕ್ಕೊಮ್ಮೆ ಎಲ್ಲ ಕಡೆ ನೀರನ್ನು ಹೊರ ಹಾಕಿ ಒಣಗಿಸಿ ಮತ್ತೆ ಶುದ್ಧ ನೀರು ಸಂಗ್ರಹಿಸಕೊಳ್ಳಬೇಕು. ವಾರಕ್ಕಿಂತ ಹೆಚ್ಚು ದಿನಗಳು ಒಂದೇ ಕಡೆ ನೀರು ಸಂಗ್ರಹವಾಗಿದ್ದರೆ ಲಾರ್ವಾ ಉತ್ಪತ್ತಿಯಾಗಿ ಸೊಳ್ಳೆಗಳು ಹೆಚ್ಚಾಗುತ್ತವೆ. ಈ ನಿಟ್ಟಿನಲ್ಲಿ ವಾರಕ್ಕೊಮ್ಮೆ ತಪ್ಪದೇ ಹಳೆ ನೀರು ತೆಗೆದು ಹೊಸ ನೀರು ತುಂಬಿಸಿಕೊಳ್ಳಲು ನಾಗರಿಕರಲ್ಲಿ ಮನವಿ ಮಾಡಿದರು.
ಡೆಂಗ್ಯೂ ಹರಡುವ ಬಗ್ಗೆ ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡುವ ವೇಳೆ ಬಿತ್ತಿಪತ್ರಗಳನ್ನು ವಿತರಿಸಿದರೆ ಲಾರ್ವಾ ಉತ್ಪತ್ತಿಯಾಗುವುದನ್ನು ತಡೆಗಟ್ಟಲು ಸಹಕಾರಿಯಾಗಲಿದೆ. ಜೊತೆ ಲಾರ್ವಾ ಉತ್ಪತ್ತಿ ತಾಣಗಳನ್ನು ಗುರಿತಿಸಿ ಔಷಧ ಸಿಂಪಡಣೆ ಮಾಡಿ ಸೊಳ್ಳೆಗಳ ಉತ್ಪತ್ತಿ ತಾಣವನ್ನು ನಿಯಂತ್ರಿಸ ಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಡೆಂಗ್ಯೂ ತಡೆಗಟ್ಟುವ ಸಲುವಾಗಿ ವಲಯವಾರು ಮನೆ-ಮನೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಿರುವ ಬಗ್ಗೆ ಸಮಗ್ರ ವರದಿಯನ್ನು ಫ್ರಿಸ್ಮ್-ಹೆಚ್ ತಂತ್ರಾಂಶದಲ್ಲಿ ಆಯಾ ದಿನವೇ ನಮೂದಿಸಬೇಕು ಎಂದು ಸೂಚಿಸಿದರು.
ಧ್ವನಿವರ್ಧಕಗಳ ಮೂಲಕ ಜಾಗೃತಿ: ನಗರದಲ್ಲಿ ಡೆಂಗ್ಯು ಪ್ರಕರಣಗಳು ಹೆಚ್ಚಿರುವ ಪ್ರದೇಶದಲ್ಲಿ ಆಟೋಗಳ ಮೂಲಕ ಧ್ವನಿವರ್ಧಕಗಳನ್ನು ಅಳವಡಿಸಿಕೊಂಡು ಡೆಂಗ್ಯು ನಿಯಂತ್ರಿಸುವ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
 

Post a comment

No Reviews