2024-09-19 04:47:17

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಗನನ್ನು ನೋಡದ ಭವಾನಿ ರೇವಣ್ಣ

ಬೆಂಗಳೂರು: ಕೆಆರ್‌ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ವಿಚಾರಣೆಗಾಗಿ ಎಸ್‌‍ಐಟಿ ಕಚೇರಿಗೆ ಭವಾನಿ ರೇವಣ್ಣ ಅವರು ಆಗಮಿಸಿದಾಗ ಪಕ್ಕದ ಕೊಠಡಿಯಲ್ಲಿ ಮಗ ಪ್ರಜ್ವಲ್‌ ತಾಯಿಯನ್ನು ನೋಡಲಾಗದೇ ತಳಮಳ ಎದುರಿಸಿದ್ದು ಕಂಡು ಬಂತು. ತಮ್ಮಂತೆ ತಾಯಿಯೂ ಕೂಡ ವಿಚಾರಣೆಗೆ ಹಾಜರಾಗಿದ್ದು, ಈ ಸಂದರ್ಭದಲ್ಲಿ ಪರಸ್ಪರ ಸಂತೈಸಲು ಕೂಡ ಆಗದಂತಹ ವಾತಾವರಣ ನಿರ್ಮಾಣವಾಗಿತ್ತು.

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಎಸ್‌‍ಐಟಿ ವಶದಲ್ಲಿದ್ದು, ನಿನ್ನೆ ಭವಾನಿ ಅವರು ಎಸ್‌‍ಐಟಿ ವಿಚಾರಣೆಗಾಗಿ ಕಚೇರಿಗೆ ಹಾಜರಾದಾಗ ಅಮ್ಮ-ಮಗ ಅಕ್ಕಪಕ್ಕದ ಕೊಠಡಿಯಲ್ಲಿದ್ದರೂ ಮುಖ ನೋಡಲಾಗಲಿಲ್ಲ.

ಕೆಆರ್‌ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ನಿನ್ನೆ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಭವಾನಿ ಅವರನ್ನು ಯಾವುದೇ ಕಾರಣಕ್ಕೂ ಎಸ್‌‍ಐಟಿ ಬಂಧಿಸುವಂತಿಲ್ಲ ಎಂದು ಹೈಕೋರ್ಟ್‌ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಎಸ್‌‍ಐಟಿ ಕಚೇರಿಗೆ ವಕೀಲರೊಂದಿಗೆ ವಿಚಾರಣೆಗಾಗಿ ಭವಾನಿ ರೇವಣ್ಣ ತೆರಳಿದಾಗ ಪಕ್ಕದ ಕೊಠಡಿಯಲ್ಲೇ ಪ್ರಜ್ವಲ್‌ ಇದ್ದರೂ ಇಣುಕಿ ನೋಡುವ ಧೈರ್ಯ ಮಾಡಲಿಲ್ಲ.

ಸುಮಾರು ಒಂದೂವರೆ ತಿಂಗಳಿನಿಂದ ಮಗನ ಮುಖವನ್ನು ಭವಾನಿ ಅವರು ನೋಡಿಲ್ಲ. ನಿನ್ನೆ ಎಸ್‌‍ಐಟಿ ವಿಚಾರಣೆ ಮುಗಿಸಿ ಸೀದಾ ಹೊರಬಂದಿದ್ದಾರೆ. ಪ್ರಜ್ವಲ್‌ ಹಾಗೂ ಭವಾನಿ ಅವರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿ ಎಸ್‌‍ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದಾರೆ.

Post a comment

No Reviews