
ಬೀದರ್: ಮುಸ್ಲಿಂಮರ ಕೆಲಸವನ್ನ ಸಚಿವ ಈಶ್ವರ ಖಂಡ್ರೆ ತಲೆಬಾಗಿ ಮಾಡಬೇಕಾಗುತ್ತದೆ. ಏಕೆಂದರೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸಾಗರ್ ಖಂಡ್ರೆ ಮುಸ್ಲಿಮರ ಮತಗಳಿಂದ ಗೆದ್ದಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ವಿವದಾತ್ಮಕ ಹೇಳಿಕೆ ನೀಡಿದ್ದಾರೆ.
ಜೂನ್.24ರಂದು ಬೀದರ್ನಲ್ಲಿ ನಡೆದ ವಕ್ಫ್ ಅದಾಲತ್ ನಲ್ಲಿ ಮಾತನಾಡಿದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್, ಕೇವಲ ಅಂದರೆ ಕೇವಲ ಮುಸ್ಲಿಂಮರ ಮತದಿಂದ ಸಾಗರ್ ಖಂಡ್ರೆ ಗೆದ್ದಿದ್ದಾನೆ, ನಮ್ಮ ಕೆಲಸವನ್ನು ತಲೆ ಬಗ್ಗಿಸಿಕೊಂಡು ಅವನು ಮಾಡಬೇಕು ಎಂದು ಹೇಳಿಕೆ ನೀಡಿದ್ದಾರೆ. ಇದೀಗ ಈ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದೆ.
Poll (Public Option)

Post a comment
Log in to write reviews