2024-09-19 04:31:34

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಟ್ರ್ಯಾಕ್ಟರ್‌ಗೆ ಬಸ್‌ ಡಿಕ್ಕಿ: ನಾಲ್ವರ ದುರ್ಮರಣ, ಹಲವರಿಗೆ ಗಾಯ

ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದ ಬಳಿ ಮೇ 17ರ ರಾತ್ರಿ ಬಸ್ ಮತ್ತು ಟ್ರ್ಯಾಕ್ಟ‌ರ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಹುಲಗಿಯ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ತೆರಳಿದ್ದ ಭಕ್ತರು ಯಲಬುರ್ಗಾ ತಾಲ್ಲೂಕಿನ ಕರಮುಡಿ ಗ್ರಾಮಕ್ಕೆ ವಾಪಸ್ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದ್ದರಿಂದ ಈ ಘಟನೆ ಜರುಗಿದೆ.

ಶಿವಪ್ಪ ಹೊಸಮನಿ ಎನ್ನುವವರು ಸಂಬಂಧಿಕರನ್ನು ಹುಲಿಗಿಗೆ ಕರೆದುಕೊಂಡು ಹೋಗಿದ್ದರು. ಹರಕೆ ತೀರಿಸಿ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ. ಕರಮುಡಿ ಗ್ರಾಮದ 22 ವರ್ಷದ ಬಸವರಾಜ, 22 ವರ್ಷದ ಮುತ್ತಪ್ಪ, ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ನಿವಾಸಿ 60 ವರ್ಷದ ಕೊಂಡಪ್ಪ ಮತ್ತು 65 ವರ್ಷದ ದುರುಗಮ್ಮ ಹನುಮಪ್ಪ ಮೃತಪಟ್ಟಿದ್ದಾರೆ.

ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯದಲ್ಲಿ ಮೃತಪಟ್ಟರು. ಕೆಲವರಿಗೆ ಗಂಭೀರವಾಗಿ ಗಾಯಗಳಾಗಿವೆ ಎಂದು ಗೊತ್ತಾಗಿದೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಯಿತು. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಭೇಟಿ ನೀಡಿ ಪರಿಶೀಲಿಸಿದರು.

Post a comment

No Reviews