2024-09-19 05:01:35

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮದ್ವೆಗೆ ಜಾತಿ ಅಡ್ಡಿ: ಒಂದೇ ಮರಕ್ಕೆ ನೇಣಿಗೆ ಶರಣಾದ ಪ್ರೇಮಿಗಳು!

ಬಾಗಲಕೋಟೆ: ಮದುವೆಗೆ ಅನುಮತಿ ನೀಡಿಲ್ಲವೆಂದು ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ನಡೆದಿದೆ.

ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಮೃತ ಪ್ರೇಮಿಗಳು. ಇವರಿಬ್ಬರ ಜಾತಿ ಬೇರೆಯಾಗಿದ್ದರಿಂದ ಹುಡುಗನ ಮನೆಯವರು ಅಂತರ್ಜಾತಿ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಜೋಡಿ ಸಾವಿನ ಹಾದಿ ಹಿಡಿದಿದೆ.

ಸಚಿನ್‌ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಪರಸ್ಪರ ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದರು. ಆದರೆ ಇಬ್ಬರದ್ದು ಬೇರೆ ಬೇರೆ ಜಾತಿಯಾಗಿದ್ದರಿಂದ ಸಚಿನ್‌ ಮನೆಯಲ್ಲಿ ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯವನ್ನು ಸಚಿನ್‌, ತನ್ನ ಪ್ರೇಯಸಿ ಪ್ರಿಯಾಳಿಗೆ ತಿಳಿಸಿದ್ದಾನೆ. ಇದರಿಂದ ಮನನೊಂದ ಪ್ರೇಮಿಗಳು ಗುರುವಾರ ರಾತ್ರಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಮಹಾಲಿಂಗಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Post a comment

No Reviews