
ಬೆಂಗಳೂರು: ಮುಡಾ ಅಕ್ರಮ ಆರೋಪ ತನಿಖೆಯನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪದ ಬಗ್ಗೆ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಎಲ್ಲವನ್ನು ಸಿಬಿಐ ತನಿಖೆಗೆ ಕೊಟ್ಟರೆ ಇಲ್ಲೇನು ಮಾಡುವ ಹಾಗಿಲ್ಲವೇ? ಸದನದಲ್ಲಿ ಯಾವ ವಿಷಯ ಚರ್ಚೆಗೆ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ. ಸ್ಪೀಕರ್ಗೆ ಯಾವ ವಿಚಾರದ ಬಗ್ಗೆ ಪತ್ರ ಕೊಡ್ತಾರೋ ನೋಡೋಣ. ಬಿಜೆಪಿಯವರಿಗೆ ನಾವು ಉತ್ತರ ಕೊಡುತ್ತೇವೆ, ಹಿಂಜರಿಯುವ ಮಾತಿಲ್ಲ ಎಂದರು.
Poll (Public Option)

Post a comment
Log in to write reviews