2024-09-19 04:58:00

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೋದಿಗೆ ಚಂದ್ರಬಾಬು ನಾಯ್ಡು ಬೆಂಬಲ

ಹೈದರಾಬಾದ್: ಬಿಜೆಪಿ ನೇತೃತ್ವದ ಎನ್‌ಡಿಎ ಕೂಟಕ್ಕೆ ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ಬೆಂಬಲ ಘೋಷಿಸಿದ್ದಾರೆ.

ತೆಲುಗುದೇಶಂ ಪಾರ್ಟಿ ಆಂಧ್ರಪ್ರದೇಶದಲ್ಲಿ ಭರ್ಜರಿ ಗೆಲುವು ಕಾಣುತ್ತಿದ್ದಂತೆಯೇ ಪ್ರಧಾನಿ ಮೋದಿ ದೂರವಾಣಿ ಮೂಲಕ ನಾಯ್ಡು ಅವರಿಗೆ ಶುಭಾಶಯ ಕೋರಿದ್ದರು. ಇವೇ ವೇಳೆಯಲ್ಲಿ ಎನ್‌ಡಿಗೆ ಬಹುಮತವಿತ್ತಾದರೂ ಮತ್ತಷ್ಟು ಪಕ್ಷಗಳತ್ತ ಕೈಚಾಚಬೇಕಾದ ಅನಿವಾರ್ಯತೆನೂ ಇತ್ತು.

ಇದಲ್ಲದೆ ಕಳೆದ ದಶಕದಿಂದ ಅಧಿಕಾರದಿಂದ ವಂಚಿತರಾಗಿದ್ದ ಟಿಡಿಪಿ, ಈಗ ಆಂಧ್ರ ಗದ್ದುಗೆಯ ಮೇಲೆ ಕಣ್ಣಿಟ್ಟಿದೆ. ಒಂದು ಕಾಲದಲ್ಲಿ ಎನ್‌ಡಿಎ ಜೊತೆ ಗುರುತಿಸಿಕೊಂಡಿದ್ದ ಟಿಡಿಪಿ ನಂತರ ಸಖ್ಯ ತೊರೆದಿತ್ತು. ಈಗ ಮತ್ತೊಮ್ಮೆ ಬೆಂಬಲ ಘೋಷಿಸುವ ಮೂಲಕ ಪ್ರಧಾನಿ ಮೋದಿ ಪಿಎಂ ಬೆಂಬಲಕ್ಕೆ ನಿಂತಿದ್ದಾರೆ,

ಆಂಧ್ರಪ್ರದೇಶದಲ್ಲಿ ಆಡಳಿತಾರೂಢ ವೈಎಸ್‌ಆರ್‌ಸಿ ಪಕ್ಷವನ್ನು ಸೋಲಿಸಿರುವ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಜಯಭೇರಿ ಭಾರಿಸಿದೆ. ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಮತ್ತು ಚಂದ್ರಬಾಬು ನಾಯ್ಡು ನಡುವಿನ ವೈಯಕ್ತಿಕ ಪ್ರತಿಷ್ಠೆಯ ಕಣವಾಗಿದ್ದ ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿ, ಬಿಜೆಪಿ, ಜನಸೇನಾ ಪಕ್ಷಗಳ ಮೈತ್ರಿ ಕೂಟ ಗೆಲುವು ಸಾಧಿಸುವ ಮೂಲಕ ಜಗನ್‌ಗೆ ಮರ್ಮಾಘಾತ ನೀಡಿದೆ. ಟಿಡಿಪಿ ಮೈತ್ರಿಕೂಟದ ಈ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದು, ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿ ಶುಭಾಷಯ ತಿಳಿಸಿದ್ದಾರೆ.

ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟ ಬಹುಮತಕ್ಕಿಂತ ಹೆಚ್ಚಿನ ಸ್ಥಾನದಲ್ಲಿ ಮುನ್ನಡೆ ಪಡೆದಿದ್ದರೂ, ಇನ್ನೂ ಹಲವು ಕ್ಷೇತ್ರಗಳಲ್ಲಿ ಅಂತಿಮ ಫಲಿತಾಂಶ ಹೊರಬೀಳಬೇಕಿದೆ. ಅಲ್ಲದೆ, ಇಂಡಿಯಾ ಮೈತ್ರಿ ಕೂಟ ಚಂದ್ರಬಾಬು ನಾಯ್ಡು ಅವರನ್ನು ಸಂಪರ್ಕಿಸಿ ಬೆಂಬಲ ಕೋರುವ ಸಾಧ್ಯತೆ ಇರುವ ಕಾರಣ, ಅದಕ್ಕೂ ಮುನ್ನವೇ ನರೇಂದ್ರ ಮೋದಿ ಅವರು ಚಂದ್ರಬಾಬು ನಾಯ್ಡು ಅವರನ್ನು ಸಂಪರ್ಕಿಸಿ ಕೇಂದ್ರದಲ್ಲಿ ಸರ್ಕಾರ ರಚನೆ ವೇಳೆ ತಮ್ಮ ಜೊತೆಗಿರುವಂತೆ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

Post a comment

No Reviews