2024-09-19 09:14:11

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬರ ಪರಿಹಾರದ ಬಗ್ಗೆ ಅಧಿಕಾರಿಗಳೊಂದಿಗೆ ಸುಧೀರ್ಘ ಚರ್ಚೆ ನಡೆಸಿದ ಸಿಎಂ

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸುಧೀರ್ಘ ಸಭೆ ನಡೆಸಿದ್ದಾರೆ.

ಬರ ಪರಿಹಾರ, ಪೂರ್ವ ಮುಂಗಾರು ಮಳೆಯ ಬಿತ್ತನೆ ಚಟುವಟಿಕೆಗಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವ್ಯವಸ್ಥೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿದ ಹತ್ತು ದಿನಗಳ ಬಳಿಕ ಚುನಾವಣಾ ಆಯೋಗವು ನೀತಿ ಸಂಹಿತೆಯ ಕೆಲ ನಿಯಮಗಳನ್ನು ಸಡಿಲಗೊಳಿಸಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಮೇ 17 ರಂದು ಎರಡೂವರೆ ತಾಸು ಸುದೀರ್ಘ ಸಭೆ ನಡೆಸಿ. ಸಭೆಯಲ್ಲಿ ಬೆಳೆ ಹಾನಿ ಪರಿಹಾರ ಹಾಗೂ ಬಿತ್ತನೆ ಚಟುವಟಿಕೆ ಬಗ್ಗೆ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

Post a comment

No Reviews