2024-09-19 04:35:03

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಜ್ಯದ ಹಿತಾಶಕ್ತಿಗೆ ಸಿಎಂ ಸಿದ್ದು ದೆಹಲಿ ಪ್ರವಾಸ 

ಬೆಂಗಳೂರು :  ರಾಜ್ಯದ ಹಿತಾಶಕ್ತಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರದಿಂದ 3 ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳ ಕುರಿತು ನೂತನ 28 ಸಂಸದರೊಂದಿಗೆ ಸಭೆ ನಡೆಸಲಿದದ್ದಾರೆ.

ಎರಡನೇ ದಿನ ಸಿದ್ದರಾಮಯ್ಯನವರು ಶುಕ್ರವಾರ  ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ 3ನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಿರುವ ಕುರಿತು ಅಭಿನಂದನೆ ಸಲ್ಲಿಸಲಿದ್ದಾರೆ. ಇದೇ ವೇಳೆ ಕೇಂದ್ರದಿಂದ ರಾಜ್ಯಕ್ಕೆ ಬೇಕಿರುವ ನೆರವಿನ ಬಗ್ಗೆ ಚರ್ಚೆ ನಡೆಸಲಿದ್ದಾರೆ. ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ಕೇಂದ್ರ ಸಚಿವರನ್ನು ಭೇಟಿಯಾಗಿ ಯೋಜನೆಗಳ ಕುರಿತು ಮಾತುಕತೆ ನಡೆಸಲಿದ್ದಾರೆ.

ಪ್ರವಾಸದ ಮೂರನೇ ದಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ವರಿಷ್ಠರಾದ ಸೋನಿಯಾ, ಪ್ರಿಯಾಂಕಾ ಗಾಂಧಿ ಸೇರಿ ಇತರರನ್ನು ಭೇಟಿಯಾಗಿ ರಾಜ್ಯದಲ್ಲಿನ ಬೆಳವಣಿಗೆಗಳ  ಕುರಿತು ತಂತೆ ಚರ್ಚೆ ನಡೆಸಲಿದ್ದಾರೆ. ಈ ವೇಳೆ ಉಪಮುಖ್ಯ ಮಂತ್ರಿ ಹುದ್ದೆ ಸೃಷ್ಟಿ ಕುರಿತು ವ್ಯಕ್ತವಾಗುತ್ತಿರುವ ಅಭಿಪ್ರಾಯ ಸೇರಿದಂತೆ ಮತ್ತಿ ತರ ವಿಚಾರಗಳ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆಗಳಿವೆ.
ಸಂಸದರೊಂದಿಗೆ ರಾಜ್ಯದ ವಿಚಾರ ಚರ್ಚೆ:
ದೆಹಲಿ ಭೇಟಿಯ ಮೊದಲ ದಿನ ಗುರುವಾರ ಸಂಜೆ 6 ಗಂಟೆಗೆ ಖಾಸಗಿ ಹೋಟೆಲ್‌ನಲ್ಲಿ ರಾಜ್ಯದ ನೂತನ 28 ಸಂಸದರೊಂದಿಗೆ ಸಭೆ ನಡೆಸಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಕೇಂದ್ರದ ಸಹಕಾರದೊಂದಿಗೆ ಅನುಷ್ಠಾನಗೊಳ್ಳಬೇಕಿರುವ ಭದ್ರಾ ಮೇಲ್ದಂಡೆ ಯೋಜನೆ, ಮೇಕೆದಾಟು, ಹಣಕಾಸು ಆಯೋಗದ ಶಿಫಾರಸು ಮಾಡುವಂತೆ ಅನುದಾನ ಬಿಡುಗಡೆಯ ಬಗ್ಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವ ಕುರಿತು ಕೇಂದ್ರದ ಮೇಲೆ ಒತ್ತಡ ಹೇರುವಂತೆ ಸಂಸದರನ್ನು ಸಿದ್ದರಾಮಯ್ಯ ಕೋರಲಿದ್ದಾರೆ. ಸಭೆಯಲ್ಲಿ ಎಲ್ಲ 28 ಸಂಸದರು ಭಾಗಿಯಾಗುವ ನಿರೀಕ್ಷೆಯಿದ್ದು, ಅದರಲ್ಲಿ ಕೇಂದ್ರ ಸಚಿವರಾಗಿರುವ ಎಚ್.ಡಿ. ಕುಮಾರಸ್ವಾಮಿ, ಪ್ರಹ್ಲಾದ್‌ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ ಕೂಡ ಭಾಗಿಯಾಗುವ ಸಾಧ್ಯತೆಗಳಿವೆ.
ಗಣಿಗಾರಿಕೆ ತಡೆ ಕುರಿತು ಚರ್ಚೆ:
ಬಳ್ಳಾರಿಯ ದೇವದರಿ ಅರಣ್ಯ ಪ್ರದೇಶದಲ್ಲಿ ಕೆಐಒಸಿಎಲ್‌ಗೆ ಗಣಿಗಾರಿಕೆ ನಡೆಸಲು ಕೇಂದ್ರ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅನುಮತಿ ನೀಡಿದ ನಂತರ ರಾಜ್ಯ ಅರಣ್ಯ ಇಲಾಖೆ ಕೆಐಒಸಿಎಲ್‌ಗೆ ಅರಣ್ಯ ಭೂಮಿ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ ನೀಡಿದೆ. ಈ ವಿಚಾರದ ಕುರಿತು ಎಚ್.ಡಿ. ಕುಮಾರಸ್ವಾಮಿ ಸಭೆಯಲ್ಲಿ ಪ್ರಸ್ತಾಪಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

Post a comment

No Reviews