
ಕಾರವಾರ: ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಅಬ್ದುಲ್ ಸುಕ್ಕೂರ್ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಅಬ್ದುಲ್ ಸುಕ್ಕೂರ್ ದುಬೈನಲ್ಲಿ ಕೆಲಸ ಮಾಡುತಿದ್ದು ಬಕ್ರೀದ್ ಹಬ್ಬ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಆಗಮಿಸಿದ್ದರು. ಇವರು ಆನ್ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಾಗೂ ಪಾಸ್ ಪೋರ್ಟ್ಗೆ ನಕಲಿ ದಾಖಲೆ ನೀಡಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಎನ್ಐಎ ಅಧಿಕಾರಿಗಳು ಶಿರಸಿ ಡಿವೈಎಸ್ ಪಿ ಕಚೇರಿಗೆ ಬಂದಿದ್ದಾರೆ. ಇಲ್ಲಿ ಅಬ್ದುಲ್ ಸುಕ್ಕೂರ್ ಗ್ರಾಮಕ್ಕೆ ಬಂದಿರುವ ಬಗ್ಗೆ ಮಾಹಿತಿ ಪಡೆದುಕೊಂಡು ದಾಳಿ ನಡೆಸಿದ್ದಾರೆ. ಈ ವೇಳೆ ಪಾಸ್ಪೊರ್ಟ್ಗೆ ನಕಲಿ ದಾಖಲೆ ನೀಡಿರುವ ಬಗ್ಗೆ ಮಾಹಿತಿ ದೃಢವಾಗಿದೆ. ಬಳಿಕ ಶಿರಸಿ ಹಾಗೂ ಬನವಾಸಿ ಪೊಲೀಸರ ಸಹಕಾರದಿಂದ ದಾಳಿ ಮಾಡಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದೆ.
Poll (Public Option)

Post a comment
Log in to write reviews