2024-09-19 04:39:29

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೋಟಿ ಕೋಟಿ ಡೀಲ್ ?

ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ಈಗಾಗಲೇ ಜೈಲು ಪಾಲಾಗಿದೆ. ಕೃತ್ಯದಲ್ಲಿ ಪೊಲೀಸರೂ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ, ದರ್ಶನ್ ಮತ್ತು 13ನೇ ಆರೋಪಿ ದೀಪಕ್ನನ್ನು ಪ್ರಕರಣದಿಂದ ಬಚಾವ್ ಮಾಡಲು 5 ಕೋಟಿ ರೂಪಾಯಿಗೆ ಡೀಲ್ ನಡೆಸಲು ಮುಂದಾಗಿದ್ದರು ಎಂಬ ಆರೋಪ ಇದೀಗ ಕೇಳಿ ಬಂದಿದೆ. ಇಷ್ಟೇ ಅಲ್ಲದೆ, ಪೊಲೀಸ್ ಅಧಿಕಾರಿಗಳ ಸೂಚನೆ ಮೇರೆಗೆ ಶವವನ್ನು ಕಾಮಾಕ್ಷಿಪಾಳ್ಯಕ್ಕೆ ಕೊಂಡೊಯ್ದು ಅಲ್ಲಿ ಎಸೆಯಲಾಗಿತ್ತು ಎನ್ನಲಾಗಿದೆ.
ರೇಣುಕಾಸ್ವಾಮಿ ಕೊಲೆ ನಂತರ ಆರೋಪಿಗಳು ಪೊಲೀಸ್ ಅಧಿಕಾರಿಗೆ ಕರೆ ಮಾಡಿದ್ದರು. ಆಗ, ನಮ್ಮ ಠಾಣಾ ವ್ಯಾಪ್ತಿಯಲ್ಲಿ ಹೆಣ ಹಾಕಬೇಡಿ ಎಂದು ಅವರು ಹೇಳಿದ್ದರೆನ್ನಲಾಗಿದೆ. 
ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾಸ್ವಾಮಿಯನ್ನು ಹೊಡೆದು ಕೊಲೆ ಮಾಡಿದ ಆರೋಪ ದರ್ಶನ್ ಗ್ಯಾಂಗ್ ಮೇಲಿದೆ. ಈ ಪ್ರದೇಶ ಬೆಂಗಳೂರಿನ ರಾಜರಾಜೇಶ್ವರಿನಗರ ಠಾಣಾ ವ್ಯಾಪ್ತಿಯಲ್ಲಿದೆ. ಕೊಲೆಯಾದ ಬಳಿಕ ಆ ಪೊಲೀಸ್ ಅಧಿಕಾರಿಯೊಂದಿಗೆ ಚರ್ಚಿಸಿದ ನಂತರವೇ ದರ್ಶನ್ ಗ್ಯಾಂಗ್ ರೇಣುಕಾಸ್ವಾಮಿ ಶವವನ್ನು ಕಾಮಾಕ್ಷಿಪಾಳ್ಯಕ್ಕೆ ಶವ ಕೊಂಡೊಯ್ದು ಎಸೆದಿದ್ದರು.
ಹತ್ಯೆ ಮಾಡಿ ಶವ ಎಸೆದ ಬಳಿಕ ಪೊಲೀಸ್ ಅಧಿಕಾರಿ ಜತೆಗೂ ಕೊಲೆ ಆರೋಪಿಗಳು ಚರ್ಚೆ ನಡೆಸಿದ್ದಾರೆ. ನಟ ದರ್ಶನ್ ಹೆಸರು ಬರುವುದನ್ನು ತಪ್ಪಿಸಲು ಡೀಲ್ಗೆ ಮುಂದಾಗಿದ್ದರು ಎಂಬ ಅನುಮಾನ ವ್ಯಕ್ತವಾಗಿದೆ. ಜೊತೆಗೆ, 13ನೇ ಆರೋಪಿ ದೀಪಕ್ ಪ್ರಭಾವಿ ರಾಜಕಾರಣಿ ಸಂಬಂಧಿಯಾಗಿದ್ದಾನೆ. ಆತನನ್ನೂ, ಈತನನ್ನೂ ಕೊಲೆ ಕೇಸ್‌ನಿಂದ ಹೊರಗಿಡಲು ಪ್ರಯತ್ನ ನಡೆದಿತ್ತೇ ಎಂಬ ಶಂಕೆಯೂ ಈಗ ವ್ಯಕ್ತವಾಗಿದೆ. ಜೊತೆಗೆ ದೀಪಕ್ ಫೋಟೋ ಸಹ ಹೊರಬಾರದಂತೆ ವ್ಯವಸ್ಥೆ ಮಾಡಲಾಗಿತ್ತು. ದೀಪಕ್‌ನನ್ನು ಅಪ್ರೂವರ್ ಮಾಡಿಕೊಂಡಿ ಕೈಬಿಡುವ ಸಂಚು ಹೂಡಲಾಗಿತ್ತು ಎಂದು ಮೂಲಗಳು ತಿಳಿಸಿದ್ದು, ಇದೀಗ ಪೊಲೀಸ್ ಅಧಿಕಾರಿಗಳ ತನಿಖೆ ಮೇಲೆಯೇ ಹಲವು ಅನುಮಾನಗಳು ವ್ಯಕ್ತವಾಗಿವೆ.

Post a comment

No Reviews