2024-09-19 04:47:52

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ದರ್ಶನ್ & ಗ್ಯಾಂಗ್‌ ಮತ್ತೆ ಪೊಲೀಸ್‌ ಕಸ್ಟಡಿಗೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ & ಗ್ಯಾಂಗ್ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 13 ಮಂದಿಯನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಹೀಗಾಗಿ ಜೂನ್ 20ರವರೆಗೆ ದರ್ಶನ್ & ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿರಲಿದೆ.
ಹೆಚ್ಚಿನ ವಿಚಾರಣೆ ನಡೆಸಲು ದರ್ಶನ್ & ಗ್ಯಾಂಗ್ ಅನ್ನು ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಪೊಲೀಸರು, ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಈ ಆದೇಶ ನೀಡಿದೆ.

ಕೋರ್ಟ್ ಪೊಲೀಸರಿಗೂ ಷರತ್ತು ನೀಡಿದೆ. ಅರೋಪಿಗಳ ಜೊತೆ ಅಮಾನವೀಯವಾಗಿ ನಡೆಸಿಕೊಳ್ಳಬಾರದು. ಆರೋಪಿಗಳಿಗೆ ವಕೀಲರ ಭೇಟಿಗೆ ಅವಕಾಶ ನೀಡಬೇಕು ಎಂದು ಪೊಲೀಸರಿಗೆ ಷರತ್ತು ನೀಡಿದೆ.

Post a comment

No Reviews