2024-09-19 09:12:59

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ದರ್ಶನ್ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್ : ಅಭಿಮಾನಿಗಳಿಗೆ ವಿಶೇಷ ಮನವಿ  ಹೇಳಿದ್ದೇನು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಸೇರಿ ಒಟ್ಟು 13 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನೂ 4 ಆರೋಪಿಗಳು ತುಮಕೂರು ಜೈಲಿನಲ್ಲಿದ್ದಾರೆ. ಮೊನ್ನೆಯಷ್ಟೇ ಕೊಲೆ ಕೇಸ್ ನಲ್ಲಿ ಜೈಲುಪಾಲಾದ ನಟ ದರ್ಶನ್ನನ್ನು ನೋಡಲು ಪತ್ನಿ ವಿಜಯಲಕ್ಷ್ಮೀ ಹಾಗೂ ಮಗ ವಿನೀಶ್ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರು.

ಇದೀಗ ಜೈಲಿನಲ್ಲಿ ದರ್ಶನ್ ಭೇಟಿಯಾದ ಬಳಿಕ ಪತ್ನಿ ವಿಜಯಲಕ್ಷ್ಮೀ ಇನ್ಸ್ಟಾದಲ್ಲಿ ಭಾವುಕ ಪೋಸ್ಟ್ ಹಾಕಿದ್ದಾರೆ. ದರ್ಶನ್ ಸೆಲೆಬ್ರಿಟಿಗಳಿಗೆ ಹೇಳಿದ ಮಾತುಗಳನ್ನ ವಿಜಯಲಕ್ಷ್ಮೀ ಹಂಚಿಕೊಂಡಿದ್ದಾರೆ. ಸೆಲೆಬ್ರಿಟಿಗಳಿಗೆ ಶಾಂತವಾಗಿರಲು ದರ್ಶನ್ ಸೂಚನೆ ಕೊಟ್ಟಿದ್ದಾರೆ ಎಂದು ವಿಜಯಲಕ್ಷ್ಮೀ ಪೋಸ್ಟ್ನಲ್ಲಿ ಹೇಳಿಕೊಂಡಿದ್ದಾರೆ.
ದರ್ಶನ್ ನಿಮ್ಮನ್ನ ಎಷ್ಟು ಪ್ರೀತಿಸ್ತಾರೆ ಅನ್ನೋದು ನಿಮಗೆಲ್ಲ ಗೊತ್ತೇ ಇದೆ. ಇಂದು ನಾವು ಈ ಪರಿಸ್ಥಿತಿಯಲ್ಲಿದ್ದೇವೆ ಮತ್ತು ನಾವು ಅವರಿಂದ ದೂರವಿರುವುದು ದುಃಖಕರವಾಗಿದೆ. ನಾನು ಹೊರಗಿನ ಪರಿಸ್ಥಿತಿಯ ಬಗ್ಗೆ ವಿವರವಾಗಿ ಮಾತನಾಡಿದ್ದೇನೆ ಮತ್ತು ಅದು ಅವರ ಹೃದಯವನ್ನು ಮುಟ್ಟಿದೆ.
ಅವರು ತಮ್ಮ ಎಲ್ಲಾ ಸೆಲೆಬ್ರಿಟಿಗಳಿಗೆ ಶಾಂತವಾಗಿರಲು ಮತ್ತು ಒಳ್ಳೆಯ ಕಾರ್ಯಗಳನ್ನು ಮಾಡುವತ್ತ ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ. ನಮ್ಮ ರಾಷ್ಟ್ರದ ನ್ಯಾಯಾಂಗ ವ್ಯವಸ್ಥೆಯಲ್ಲಿ ನಮಗೆ ಅಪಾರ ನಂಬಿಕೆ ಇದೆ ಮತ್ತು ಮುಂದೆ ಉಜ್ವಲವಾದ ದಿನಗಳು ಬರಲಿವೆ ಎಂದು ನನಗೆ ಖಾತ್ರಿಯಿದೆ.

ದರ್ಶನ್ ಅವರ ಅನುಪಸ್ಥಿತಿಯಲ್ಲಿ ಮಾತು ನಡೆಯ ಮೂಲಕ ಅವರಿಗೆ ಹಾನಿ ಮಾಡಲು ಯತ್ನಿಸುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾರೆ ಎಂದು ನಾನು ದೃಢವಾಗಿ ನಂಬುತ್ತೇನೆ. ಈ ಕಷ್ಟದ ಸಮಯದಲ್ಲಿ ನಿಮ್ಮ ಬೆಂಬಲವನ್ನು ವಿನಂತಿಸಿ. ನೀವು ಶಾಂತವಾಗಿರುವುದು ನಮ್ಮ ದೊಡ್ಡ ಶಕ್ತಿಯಾಗಿದೆ. ಇದೂ ದಾಟಿ ಸತ್ಯಕ್ಕೆ ಜಯ ಸಿಗುತ್ತದೆ ಎಂದು ವಿಜಯಲಕ್ಷ್ಮೀ ಬಾವುಕ ಪೋಸ್ಟ್ ಮಾಡಿದ್ದಾರೆ

Post a comment

No Reviews