
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಆರೋಪದ ಹಿನ್ನಲೆ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಸೇರಿರುವ, ದರ್ಶನ್ನ್ನನ್ನು ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್ ಭೇಟಿ ಮಾಡಿದ್ದಾರೆ.
ಪತ್ನಿ ಜೊತೆ ಮಾತನಾಡಿದ ದರ್ಶನ್ ಬಳಿಕ ಮಗನ ಜೊತೆ ಮಾತನಾಡುತ್ತಿದ್ದಂತೆ ದರ್ಶನ್ ಕಣ್ಣೀರು ಸುರಿಸಿದ್ದಾರೆ. ಮಗ ವಿನೀಶ್ ಹಾಗೂ ವಿಜಯಲಕ್ಷ್ಮಿ ಒಳಗೆ ಹೋಗುತ್ತಿದ್ದಂತೆ ದರ್ಶನ್ ಭಾವುಕರಾಗಿ ಮಗನನ್ನು ತಬ್ಬಿಕೊಂಡು ಕೆಲ ಹೊತ್ತು ಕಣ್ಣೀರು ಹಾಕಿದ್ದಾರೆ. ಅರ್ಧ ಘಂಟೆಯ ಭೇಟಿಯಲ್ಲಿ ದರ್ಶನ್ ಭಾವುಕದಿಂದಲೇ ಮಾತನಾಡಿದರು. ಪತ್ನಿ ವಿಜಯಲಕ್ಷ್ಮಿಗಿಂತ ಹೆಚ್ಚಿನ ಸಮಯವನ್ನು ಮಗನ ಜೊತೆಗೆ ಕಳೆದರು ಎಂದು ತಿಳಿದು ಬಂದಿದೆ.
Poll (Public Option)

Post a comment
Log in to write reviews