2024-09-19 05:05:58

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೀಸಲಾತಿ ವಿರೋಧಿಸಿ ಬಾಂಗ್ಲದಲ್ಲಿ ತೀವ್ರ ಪ್ರತಿಭಟನೆ: ಮೃತರ ಸಂಖ್ಯೆ 32ಕ್ಕೆ ಏರಿಕೆ

ಢಾಕಾ: ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ಬಾಂಗ್ಲದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಸ್ವರೂಪ ಪಡೆದಿದೆ. ಗುರುವಾರ ದೇಶದ ವಿವಿಧೆಡೆ ಹಿಂಸಾಚಾರ ನಡೆದಿದ್ದು, 25 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಪ್ರತಿಭಟನೆಯಲ್ಲಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.

ಪ್ರತಿಭಟನೆಗಳನ್ನು ನಿಯಂತ್ರಿಸಲು ಬಾಂಗ್ಲಾದೇಶದ ಹಲವೆಡೆ ಮೊಬೈಲ್‌ ಇಂಟರ್‌ನೆಟ್‌ ಸೇವೆಗಳನ್ನು ಕಡಿತಗೊಳಿಸಲಾಗಿತ್ತು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಢಾಕಾದಲ್ಲಿ ಕೋಲು, ದೊಣ್ಣೆ ಮತ್ತು ಕಲ್ಲುಗಳೊಂದಿಗೆ ರಸ್ತೆಗಿಳಿದು ಹೆದ್ದಾರಿ ಗಳನ್ನು ತಡೆದರು. ಸರ್ಕಾರಿ ಕಟ್ಟಡಗಳನ್ನು
ಹಾನಿಗೊಳಿಸಿ, ಸಶಸ್ತ್ರ ಪೊಲೀಸರ ಜತೆ ಘರ್ಷಣೆಗಿಳಿದಿದ್ದಾರೆ.

ಪ್ರತಿಭಟನಕಾರರು ಬಾಂಗ್ಲಾದೇಶದ ಸರ್ಕಾರಿ ವಾಹಿನಿ ಬಿಟಿವಿಯ ಪ್ರಧಾನ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಇದರಿಂದ ಕಚೇರಿಯೊಳಗೆ ಹಲವರು ಸಿಕ್ಕಿಬಿದ್ದು, ತೊಂದರೆ ಅನುಭವಿಸಿದರು. ಏಕಾಏಕಿ ನೂರಾರು ಪ್ರತಿಭಟನಕಾರರು ಕಚೇರಿಯ ಆವರಣದೊಳಗೆ ನುಗ್ಗಿ ಕನಿಷ್ಠ 60ಕ್ಕೂ ಹೆಚ್ಚು ವಾಹನಗಳು ಮತ್ತು ಕಚೇರಿಯ ಕಟ್ಟಡಕ್ಕೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಹಲವಾರು ಮಂದಿ ಗಾಯಗೊಂಡಿದ್ದು, ಆಸ್ಪತ್ರೆ ದಾಖಲಾಸಿಲಗಿದೆ  ಪ್ರತಿಭಟನೆಯನ್ನು ನಿಯಂತ್ರಿಸಲು ಗಡಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಈ ಮಧ್ಯೆ ಬಾಂಗ್ಲಾದೇಶದ ಸರ್ಕಾರ. ವಿದ್ಯಾರ್ಥಿಗಳ ಜೊತೆಗಗೆ ಮಾತುಕತೆ ನಡೆಸಲು ಸಿದ್ದ ಎಂದು ಹೇಳಿಕೆ ನೀಡಿದೆ.

 

Post a comment

No Reviews