2024-09-19 04:43:12

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚನ್ನಪಟ್ಟಣ ಗೆಲ್ಲಲು ಡಿಸಿಎಂ ಡಿಕೆಶಿ ದೊಡ್ಡ ಗೇಮ್ಪ್ಲಾನ್  ಅಚ್ಚರಿ ಅಭ್ಯರ್ಥಿಯಾಗಿ ಪುತ್ರಿ ಐಶ್ವರ್ಯಾ ಸ್ಪರ್ಧೆ?

ಚನ್ನಪಟ್ಟಣ :ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಪುತ್ರಿ ಐಶ್ವರ್ಯಾ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಚನ್ನಪಟ್ಟಣ ಗೆಲ್ಲಲು ಡಿಸಿಎಂ ಡಿಕೆ ಶಿವಕುಮಾರ್ ದೊಡ್ಡ ಗೇಮ್ಪ್ಲಾನ್ ನಡೆಸಿದ್ದು, ಪ್ರತಿಷ್ಠಿತ ಚನ್ನಪಟ್ಟಣ ಅಖಾಡಕ್ಕೆ ಪುತ್ರಿ ಐಶ್ವರ್ಯಾ ಅವರನ್ನು ಅಚ್ಚರಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್ನಲ್ಲಿ ಚರ್ಚೆಗಳು ನಡೆಯುತ್ತಿದೆ.

ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿರುವ ಡಿಕೆ ಶಿವಕುಮಾರ್‌ ಅವರ ಸೋದರ ಡಿಕೆ ಸುರೇಶ್‌ ಅವರು ಚನ್ನಪಟ್ಟಣದಲ್ಲಿಉಪಚುನಾವಣೆ ಸ್ಪರ್ಧೆಗೆ ಆಸಕ್ತಿ ತೋರದ ಹಿನ್ನೆಲೆಯಲ್ಲಿ ಐಶ್ಚರ್ಯಾ ಅವರನ್ನು ಕಣಕ್ಕಿಳಿಸುವ ತೀರ್ಮಾನಕ್ಕೆ ಡಿಕೆಶಿ ಕುಟುಂಬ ಬಂದಿದೆ ಎನ್ನಲಾಗಿದೆ.
ಜೆಡಿಎಸ್ ಕ್ಷೇತ್ರವನ್ನ ಕಾಂಗ್ರೆಸ್ ತೆಗೆದುಕೊಳ್ಳಲು ಡಿಸಿಎಂ ಕಸರತ್ತು ನಡೆಸುತ್ತಿದ್ದು, ಜೆಡಿಎಸ್‌ ಭದ್ರಕೋಟೆಯಾದ ಚನ್ನಪಟ್ಟಣದಲ್ಲಿ ಕೈ ಗೆಲ್ಲಿಸುವ ಮೂಲಕ ಸೇಡು ತೀರಿಸಿಕೊಳ್ಳಲು ಡಿಕೆಶಿ ತಯಾರಿ ಮಾಡಿಕೊಂಡಿದ್ದಾರೆ. ಮಾಜಿ ಸಿಎಂ ಎಸ್‌ಎಂ ಕೃಷ್ಣ ಕುಟುಂಬದ ಸೊಸೆಯೂ ಆಗಿರುವ ಐಶ್ವರ್ಯಾ ಅವರನ್ನು ಈ ಉಪಚುನಾವಣೆ ಮೂಲಕ ರಾಜಕಾರಣಕ್ಕೆ ಪರಿಚಯಿಸಲು ತೀರ್ಮಾನಿಸಲಾಗಿದ್ದು, ಅದಕ್ಕಾಗಿ ಪೂರಕ ವೇದಿಕೆಯನ್ನು ಅಣಿಗೊಳಿಸಲಾಗುತ್ತಿದೆ ಎಂದು ಡಿಸಿಎಂ ಡಿಕೆಶಿ ಮೂಲಗಳಿಂದ ತಿಳಿದು ಬಂದಿದೆ.

 

Post a comment

No Reviews