
ಹೈದರಬಾದ್: ವ್ಯಕ್ತಿಯೊಬ್ಬರು ಬಿರಿಯಾನಿ ತಿನ್ನುವಾಗ ಗಂಟಲಿನಲ್ಲಿ ಚಿಕನ್ ಪೀಸ್ ಸಿಲುಕಿ ಉಟಿರುಗಟ್ಟಿ ಸಾವನ್ನಪ್ಪಿರುವ ಘಟನೆ ಹೈದರಬಾದ್ನಲ್ಲಿ ನಡೆದಿದೆ.
ಈ ಘಟನೆ ಹೈದರಬಾದ್ನ ಶಾದ್ ನಗರದಲ್ಲಿ ನಡೆದಿದ್ದು, ಬಿರಿಯಾನಿ ತಿನ್ನುವಾಗ ಗಂಟಲಲ್ಲಿ ಚಿಕನ್ ಪೀಸ್ ಸಿಲುಕಿದ ಪರಿಣಾಮ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇಲ್ಲಿನ ಅಣ್ಣಾರಾಮ್ ಗ್ರಾಮದ ನಿವಾಸಿ ಶ್ರೀಕಾಂತ್ (39 ವರ್ಷ) ಎಂಬ ವ್ಯಕ್ತಿ ತನ್ನ ಸಹೋದರಿಯನ್ನು ಭೇಟಿ ಮಾಡಲೆಂದು ಹೈದರಬಾದ್ಗೆ ತೆರಳಿದ್ದರು. ಆ ಸಂದರ್ಭದಲ್ಲಿ ಅಲ್ಲೇ ಒಂದು ಬಾರ್ಗೆ ಹೋಗಿ ಮದ್ಯ ಮತ್ತು ಚಿಕನ್ ಬಿರಿಯಾನಿ ಸೇವನೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಅವರಿಗೆ ಉಸಿರುಗಟ್ಟಿದಂತಾಗಿ ತೀವ್ರ ಉಸಿರಾಟದ ತೊಂದರೆಯುಂಟಾಗಿ ಅಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಶ್ರೀಕಾಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ದುರಾದೃಷ್ಟವಶಾತ್ ಚಿಕಿತ್ಸೆಗೂ ಮುನ್ನವೇ ಅವರು ಸಾವನ್ನಪ್ಪಿದ್ದಾರೆ. ಮೊದಲಿಗೆ ಅತಿಯಾದ ಮದ್ಯ ಸೇವನೆಯಿಂದ ಸಾವನ್ನಪ್ಪಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಗಂಟಲಲ್ಲಿ ಮಾಂಸದ ತುಂಡು ಸಿಕ್ಕಿ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ಪತ್ತೆಯಾಗಿದೆ.
Poll (Public Option)

Post a comment
Log in to write reviews