2024-09-19 05:05:03

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚಾಲಕನ ಮೇಲೆ ನಿರ್ಲಕ್ಷ್ಯದ ಆರೋಪ: 4 ವರ್ಷದ ಮಗು ಮೃತ

ಕಲಬುರಗಿ: ಶಾಲಾ ವಾಹನ ಹರಿದು ನಾಲ್ಕು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.

ಮೃತ ಮಗು ಶಿವಪುರ ಗ್ರಾಮದ ರಾಜಶೇಖರ್ ಎಂಬವರ ಪುತ್ರಿ ಖುಷಿ ಬನ್ನಟ್ಟಿ (4 ವರ್ಷ) . ಶಾಲಾ ವಾಹನ ಚಾಲಕ ಶ್ರೀಶೈಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಶಾಲಾ ವಾಹನದಲ್ಲಿ ಬಂದಿಳಿದ ಮಗು ತನ್ನ ತಂದೆಯನ್ನು ಕಂಡು ವಾಹನದ ಹಿಂಬದಿಯಾಗಿ ಓಡಿತ್ತು. ಇದನ್ನು ಗಮನಿಸದ ಚಾಲಕ ಅಷ್ಟರಲ್ಲೇ ವಾಹನವನ್ನು ಹಿಂದಕ್ಕೆ ತಿರುಗಿಸಿಕೊಳ್ಳುವಾಗ ಹಿಂಬದಿ ಚಕ್ರದಡಿಗೆ ಬಾಲಕಿ ಸಿಲುಕಿ ಪ್ರಾಣಬಿಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಚಾಲಕನ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣ ಎಂದು ಮೃತ ಬಾಲಕಿಯ ಪೋಷಕರು ಆರೋಪಿಸಸಿದ್ದು, ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Post a comment

No Reviews