2024-09-19 04:35:03

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ದಸರಾ ಆನೆ ಅರ್ಜುನ ಸ್ಮಾರಕ ನಿರ್ಮಾಣ ವಿವಾದ.

ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ, ನಾವು ಅರ್ಜುನ ಆನೆ ಅಭಿಮಾನಿಗಳು, ಮಳೆಗಾಲದ ಆರಂಭದಲ್ಲೇ ಸ್ಮಾರಕ ಆಗಬೇಕು ಎಂಬುದು ನಮ್ಮ ಉದ್ದೇಶ ಆಗಿತ್ತು. ಅದಕ್ಕಾಗಿ ವಾಟ್ಸಪ್‌ನಲ್ಲಿ ಮೇ 1ರಂದು 'ಅರ್ಜುನ ಪಡೆ' ಗ್ರೂಪ್ ಕ್ರಿಯೇಟ್ ಮಾಡಿದೆವು. ಸುಮಾರು 900 ಮೆಂಬರ್ ಆಗಿದ್ದಾರೆ. ಇದೇ ವೇಳೆ ನಟ ದರ್ಶನ್ ಅವರು ಸ್ಮಾರಕ ನಿರ್ಮಿಸಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು. ನಾನು ಯಾರ ಬಳಿಯೂ ದುಡ್ಡು ಕೇಳಿಲ್ಲ. ಅರ್ಜುನನ ಮೇಲಿನ ಅಭಿಮಾನಕ್ಕೆ "ಅರ್ಜುನ ಪಡೆ" ವಾಟ್ಸಪ್ ಗ್ರೂಪ್‌ನಲ್ಲಿರುವವರು ನನ್ನ ಅಕೌಂಟ್‌ಗೆ ಹಣ ಹಾಕಿದ್ದಾರೆ. ಸುಮಾರು 50 ಸಾವಿರ ರೂ. ಕಲೆಕ್ಟ್ ಆಗಿದೆ. ನಟ ದರ್ಶನ್ ಕಡೆಯವರು ಸಂಪತ್ ಕಲ್ಲು ಕೊಡಿಸಿದರು. ತಾತ್ಕಾಲಿಕವಾಗಿ ಸ್ಮಾರಕ ನಿರ್ಮಿಸಲು ಎಸಿಎಫ್ ಮೌಖಿಕವಾಗಿ ಅನುಮತಿ ಕೊಟ್ಟಿದ್ದರು. ಕೆಲಸ ಮಾಡಲು ಹೋದಾಗ ಆರ್‌ಎಫ್‌ಒ ತಡೆದರು. ಡಿಸಿಎಫ್ ಜತೆ ಮಾತನಾಡಿದ ಅರಣ್ಯ ಇಲಾಖೆಯೇ ಸ್ಮಾರಕ ನಿರ್ಮಿಸುತ್ತೆ ಅಂತ ಹೇಳಿದ್ರು, ಕಲ್ಲು ವಾಪಸ್ ತೆಗೆದುಕೊಂಡು ಹೋಗಿ ಅಂತ ಹೇಳಿದ್ರು. ಸಾಮಾಜಿಕ ಜಾಲತಾಣದಲ್ಲಿ ವಿವಾದವಾದ ಬಳಿಕ ಅರಣ್ಯ ಇಲಾಖೆಯವರು ತರಾತುರಿಯಲ್ಲಿ ತಾತ್ಕಾಲಿಕವಾಗಿ ಸ್ಮಾರಕ ನಿರ್ಮಿಸಿದ್ದಾರೆ. ಆರ್‌ಎಫ್‌ಒ 30 ಸಾವಿರ ರೂ. ಕಲ್ಲಿನ ಹಣವನ್ನು ನನ್ನ ಅಕೌಂಟ್‌ಗೆ ಹಣ ಹಾಕಿದ್ದಾರೆ. ನಾವು ನಟ ದರ್ಶನ್, ಅರ್ಜುನ ಆನೆ ಹೆಸರು ಬಳಸಿಕೊಂಡು ಹಣ ಎಲ್ಲೂ ವಸೂಲಿ ಮಾಡಿಲ್ಲ. ಮಲೆನಾಡು ರಕ್ಷಣಾ ವೇದಿಕೆಯ ಸಾಗರ್ ಪ್ರಚಾರಕ್ಕಾಗಿ ವಿಡಿಯೋದಲ್ಲಿ ಏನೇನೋ ಮಾತನಾಡಿದ್ದಾರೆ. ನಾನು ಅರ್ಜುನನ ಅಭಿಮಾನಿ ಹೊರತು ಕಳ್ಳ ಅಲ್ಲ. ಅರ್ಜುನ ಪಡೆ ವಾಟ್ಸಪ್ ಗ್ರೂಪ್ ಅಡ್ಮಿನ್ ಎಚ್.ಎನ್.ನವೀನ್ ಸ್ಪಷ್ಟನೆ.

Post a comment

No Reviews