
ಮಂಡ್ಯ: ಕೌಟುಂಬಿಕ ಕಲಹದಿಂದ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಿರಂಗೂರು ಗ್ರಾಮದಲ್ಲಿ ನಡೆದಿದೆ. ಪ್ರಭಾವತಿ (45) ಮತ್ತು ದಿಲೀಪ್ (45) ಮೃತರು ಎಂದು ಗುರುತಿಸಲಾಗಿದೆ.
ದಿಲೀಪ್ ಹಾಗೂ ಪ್ರಭಾವತಿ ದಂಪತಿ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ಇದರಿಂದಾಗಿ ಕಳೆದ ರಾತ್ರಿ ಪ್ರಭಾವತಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿ ಸಾವಿನಿಂದಾಗಿ ಮನನೊಂದು ಪತಿ ದಿಲೀಪ್ ಕೂಡ ಬೆಳಗ್ಗೆಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿನೀಡಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Poll (Public Option)

Post a comment
Log in to write reviews