2024-09-19 04:59:43

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

RCB ತಂಡದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡಬೇಕೆಂದು ಅಭಿಮಾನಿಗಳಿಂದ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ (Karnataka Jobs Reservation) ಹುದ್ದೆಗಳಲ್ಲಿ ಶೇ.75 ಮೀಸಲಾತಿ ನಿಗದಿಪಡಿಸುವ ಕರಡು ಮಸೂದೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಈ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಇದೀಗ ಆರ್​ಸಿಬಿ(RCB Reservation) ತಂಡದಲ್ಲಿಯೂ ಕೂಡ ಮೀಸಲಾತಿ ನೀಡಬೇಕು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದಲ್ಲಿ ಪ್ರತಿ ಬಾರಿಯೂ ಕರ್ನಾಟಕ ಆಟಗಾರರಿಗೆ ಅವಕಾಶ ನೀಡುವುದಿಲ್ಲ. ಒಂದೆಡರು ಮಂದಿಯನ್ನು ಮಾತ್ರ ಹರಾಜಿನಲ್ಲಿ ಖರೀದಿ ಮಾಡಿದರೂ ಕೂಡ ಅವರಿಗೆ ಆಡುವ ಅವಕಾಶ ನೀಡದೆ ಕೇವಲ ಬೆಂಚ್ನಲ್ಲಿ ಕೂರಿಸಿಡುತ್ತಾರೆ. ಪ್ರತಿ ಬಾರಿ ಹರಾಜು ನಡೆದಾಗಲೂ ಆರ್​ಸಿಬಿ ಅಭಿಮಾನಿಗಳು ಕನ್ನಡಿಗ ಆಟಗಾರರ ಕಡೆಗಣನೆಯ ಬಗ್ಗೆ ಫ್ರಾಂಚೈಸಿ ವಿರುದ್ಧ ಆಕ್ರೋಶ ಹೊರಹಾಕುತ್ತಲೇ ಇರುತ್ತಾರೆ. ಇದೀಗ ಕರ್ನಾಟಕದಲ್ಲಿ ಖಾಸಗಿ ಕೈಗಾರಿಕೆಗಳಲ್ಲಿ ಸರ್ಕಾರ ಮೀಸಲಾತಿ ಜಾರಿಗೆ ತರುವ ಚಿಂತನೆ ನಡೆಸಿದ ಬೆನ್ನಲ್ಲೇ ಐಪಿಎಲ್​ನಲ್ಲಿ ಆರ್​ಸಿಬಿ ತಂಡದಲ್ಲಿಯೂ ಶೇ 50ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿದ್ದಾರೆ.

ಆರ್​ಸಿಬಿಯ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮೀಸಲಾತಿ ಜಾರಿ ಮಾಡುವಂತೆ ಹಲವು ಟ್ವೀಟ್​ ಮಾಡಲಾರಂಭಿಸಿದ್ದಾರೆ. ಐಪಿಎಲ್​ ಆರಂಭವಾಗಿ 17 ಆವೃತ್ತಿ ಕಳೆದರೂ ಕೂಡ ಇದುವರೆಗೂ ಆರ್​ಸಿಬಿ ಕಪ್​ ಗೆದ್ದಿಲ್ಲ. ನಮ್ಮ ರಾಜ್ಯದಲ್ಲಿ ಅದೆಷ್ಟೋ ಸ್ಟಾರ್​ ಆಟಗಾರರಿದ್ದರೂ ಕೂಡ ಅವರನ್ನು ಆರ್​ಸಿಬಿ ಖರೀದಿ ಮಾಡದೆ ಸರಿಯಾಗಿ ಆಡಲು ಬಾರದ ಆಟಗಾರರಿಗೆ ಅತ್ಯಧಿಕ ಮೊತ್ತದ ಬಿಡ್​ ಮಾಡಿ ತಂಡ ಸೇರಿಸಿಕೊಳ್ಳುತ್ತಿದೆ. ಈ ಬಾರಿಯ ಮೆಗಾ ಹರಾಜಿನಲ್ಲಾದರು ಕನ್ನಡಿಗ ಆಟಗಾರರಿಗೆ ಅವಕಾಶ ನೀಡಲಿದೆಯಾ ಎಂದು ಕಾದು ನೋಡಬೇಕಿದೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ತಕ್ಷಣವೇ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತಗೊಂಡಿತ್ತು. ಪ್ರಮುಖ ಉದ್ಯಮಿಗಳಾದ ಮೋಹನ್ ದಾಸ್ ಪೈ,ಕಿರಣ್ ಮಜುಂದಾರ್ ಅವರು ಈ ಬಗ್ಗೆ ಆಕ್ಷೇಪ ಎತ್ತಿದ್ದರು. ನೆರೆ ರಾಜ್ಯದ ಸರ್ಕಾರಗಳೂ ಇದರ ಬಗ್ಗೆ ತಕರಾರು ಎತ್ತಿದ್ದವು. ಈ ಒತ್ತಡಕ್ಕೆ ಬಗ್ಗಿರುವ ಸರ್ಕಾರ ಮಸೂದಗೆ ತಾತ್ಕಾಲಿಕ ತಡೆಯನ್ನು ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

Post a comment

No Reviews