2024-09-19 04:40:02

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

‘ಎಮರ್ಜೆನ್ಸಿ’ ಚಿತ್ರಕ್ಕೆ ಬ್ಯಾನ್ ಭಯ

ಕಂಗನಾ ರಣಾವತ್ ನಟಿಸಿ, ನಿರ್ದೇಶಿಸಿರುವ ‘ಎಮರ್ಜೆನ್ಸಿ’ ಸಿನಿಮಾದ ಟ್ರೇಲರ್ ವಾರದ ಹಿಂದಷ್ಟೇ ರಿಲೀಸ್ ಆಗಿತ್ತು. ಈ ಬೆನ್ನಲ್ಲೇ ಸಿನಿಮಾ ವಿವಾದ ಮಾಡುವ ಸೂಚನೆ ನೀಡಿತ್ತು. ಈಗ ಸಿನಿಮಾ ಮೇಲೆ ಬ್ಯಾನ್ ಹೇರುವಂತೆ ಅಕಲಾ ತಕ್ತ್ ಹಾಗೂ ಶಿರೋಮಣಿ ಗುರುದ್ವಾರ ಪರಬಂಧಕ್ ಸಮಿತಿ (ಎಸ್​ಜಿಪಿಸಿ) ಒತ್ತಾಯ ಮಾಡಿದೆ ಎನ್ನಲಾಗಿದೆ. ಸಿಖ್ ವ್ಯಕ್ತಿಗಳನ್ನು ತಪ್ಪಾಗಿ ತೋರಿಸಲಾಗಿದೆ ಮತ್ತು ಸಮುದಾಯದ ಇತಿಹಾಸವನ್ನು ಅಗೌರವಿಸುವ ಕೆಲಸ ಆಗಿದೆ ಎಂದು ಸಮಿತಿಯವರು ಹೇಳಿದ್ದಾರೆ.

ಎಸ್​ಜಿಪಿಸಿ ಮುಖ್ಯಸ್ಥ ಹರ್ಜಿಂದರ್ ಸಿಂಗ್ ಧಮಿ ಅವರು ಈ ಬಗ್ಗೆ ಮಾತನಾಡಿದ್ದಾರೆ.

1975ರಲ್ಲಿ ತುರ್ತು ಪರಿಸ್ಥಿತಿ ಹೇರಲಾಯಿತು. ಇದನ್ನು ಆಧರಿಸಿ ಕಂಗನಾ ಸಿನಿಮಾ ಮಾಡಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ರಾಜಕೀಯ ಜೀವನ, ಅವರು ಎದುರಿಸಿದ ಸವಾಲುಗಳನ್ನು ತೋರಿಸಲಾಗಿದೆ. ಈ ಟ್ರೇಲರ್​ನ ಸಿಖ್ ಸಮುದಾಯವರು ಇಷ್ಟಪಟ್ಟಿಲ್ಲ. ಈಗಾಗಲೇ ಎಸ್​ಜಿಪಿಸಿ ಅವರು ಕಂಗನಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅವರ ವಿರುದ್ಧ ಎಫ್​ಐಆರ್​ಗೆ ಆಗ್ರಹಿಸಲಾಗಿದೆ.

‘ಸಿನಿಮಾಗಳಲ್ಲಿ ನಮ್ಮ ಇತಿಹಾಸವನ್ನು ತಪ್ಪಾಗಿ ಚಿತ್ರಿಸುವುದರಿಂದ ಸಿಖ್ ಸಮುದಾಯವು ಪದೇ ಪದೇ ನೋವುಂಟುಮಾಡುತ್ತಿದೆ. ಭವಿಷ್ಯದಲ್ಲಿ ಇಂತಹ ಸಿನಿಮಾಗಳನ್ನು ತಡೆಯಬೇಕು. ಭಾರತೀಯ ಚಿತ್ರರಂಗದಲ್ಲಿ ಸಿಖ್ ಭಾವನೆಗಳನ್ನು ಗೌರವಿಸುವುದನ್ನು ಖಚಿತಪಡಿಸಿಕೊಳ್ಳಲು ಸಿಖ್ ಸದಸ್ಯರನ್ನು ಸೆನ್ಸಾರ್ ಮಂಡಳಿಯಲ್ಲಿ ಸೇರ್ಪಡೆ ಮಾಡಬೇಕು’ ಎಂದು ಎಜ್​ಪಿಸಿ ಮುಖ್ಯಸ್ಥ ಆಗ್ರಹಿಸಿದ್ದಾರೆ.

Post a comment

No Reviews