ಟಾಪ್ 10 ನ್ಯೂಸ್
ಇಂದಿನಿಂದ ಬಿಎನ್ಎಸ್ ಉಲ್ಲೇಖಿಸಿ ಎಫ್ಐಆರ್ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೂಚನೆ

ಬೆಂಗಳೂರು : ಹೊಸದಾಗಿ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬರುತ್ತಿದ್ದು, ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಕಾಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ತಿಳಿಸಿದ್ದಾರೆ.
ಬಿಎನ್ಎಸ್ ಕಾಯ್ದೆಗಳ ಅನುಷ್ಠಾನ ಕುರಿತು ಈಗಾಗಲೇ ಇಲಾಖೆ ಎಲ್ಲ ಹಂತದ ಅಧಿಕಾರಿ ಹಾಗೂ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಜೊತೆಗೆ, ಮೈಸೂರು ಪೊಲೀಸ್ ಅಕಾಡೆಮಿಯಿಂದ ಕನ್ನಡದಲ್ಲೇ ಹೊಸ ಕಾಯ್ದೆಗಳ ಕನ್ನಡ ಕೈಪಿಡಿ ಸಿದ್ದಪಡಿಸಿ ವಿತರಿಸಲಾಗಿದೆ. ಅದೇ ಪ್ರಕಾರ ಪೊಲೀಸರು ಬಿಎನ್ಎಸ್ ಕಾಯ್ದೆಗಳನ್ನು ಉಲ್ಲೇಖಿಸಿ ಎಫ್ಐಆರ್ ದಾಖಲಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಹೊಸ ಕಾಯ್ದೆ ಹಾಗೂ ಕಲಂಗಳು ಎಫ್ಐಆರ್ನಲ್ಲಿ ಮಾತ್ರವಲ್ಲದೆ, ಪೊಲೀಸ್ ಐ.ಟಿ (ವೆಬ್ಸೈಟ್) ಅಲ್ಲು ಬದಲಾವಣೆ ಆಗಿದೆ. ಎಫ್ಐಆರ್ ಜತೆಗೆ ಇಲ್ಲಿಯೂ ಬಿಎನ್ಎಸ್, ಕಾಯ್ದೆ ಬಗ್ಗೆಯೂ ಸಾರ್ವಜನಿಕರಿಗೆ ಮಾಹಿತಿ ಲಭ್ಯವಾಗುವಂತೆ ಸಿದ್ದಪಡಿಸಲಾಗಿದೆ.
Poll (Public Option)

Post a comment
Log in to write reviews