2024-09-19 04:50:18

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಗ್ನಿ ದುರಂತ: 75 ಲಕ್ಷದ ಯಂತ್ರೋಪಕರಣ ನಷ್ಟ

ಬೆಳಗಾವಿ: ಕಾಗವಾಡದ ಶಿರಗುಪ್ಪಿ ಗ್ರಾಮದ ಅಂಗಡಿಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿ 75 ಲಕ್ಷದಷ್ಟು ವಸ್ತುಗಳು ನಷ್ಟ ಉಂಟಾಗಿದ್ದು ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. 
ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಶಿವ ಶಕ್ತಿ ವೀಲ್ಸ್ ಅಂಗಡಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ 4 ಕಾರ್‌ಗಳು, ಟಯರ್‌ ಸೇರಿದಂತೆ ಸುಮಾರು 75 ಲಕ್ಷದಷ್ಟು ಯಂತ್ರೋಪಕರಣಗಳು ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಅಗ್ನಿ ನಂದಿಸಿದ್ದಾರೆ. ಬೆಂಕಿ ನಂದಿಸಿದ್ದರಿಂದ ಪಕ್ಕದ ಅಂಗಡಿ ಮುಂಗ್ಗಟ್ಟುಗಳಿಗೆ ಯಾವುದೇ ಹಾನಿಯಾಗಿಲ್ಲ. ಈ ಘಟನೆಯು ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ನಿಂದ ಆಗಿದೆ ಎಂಬುದು ತಿಳಿದು ಬಂದಿದೆ.

Post a comment

No Reviews