2024-09-19 05:04:46

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಪಘಾತಕ್ಕೆ ನಾಲ್ವರು ಬಲಿ

ಚಿತ್ರದುರ್ಗ: ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.
ಟೈಯರ್ ಬ್ಲಾಸ್ಟ್ ಆದ ಪರಿಣಾಮ ಕಾರು-ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಲಾರಿಯ ಹಿಂಬಾಗಕ್ಕೆ ಕಾರು ಗುದ್ದಿದೆ. ಘಟನೆಯಲ್ಲಿ ಐವರ ಸ್ಥಿತಿ ಗಂಭೀರವಾಗಿದ್ದು  ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಮೃತರ ಗುರುತು ಇನ್ನೂ ಕೂಡಾ ಪತ್ತೆಯಾಗಿಲ್ಲ ಈ ಬಗ್ಗೆ ಪೊಲೀಸ್ ತನಿಖೆ ಮುಂದುವರಿಸಿದ್ದಾರೆ.

Post a comment

No Reviews