2024-09-19 04:46:16

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹುಚ್ಚು ನಾಯಿ ಕಡಿತದಿಂದ ಬಾಲಕಿಗೆ ಗಂಭೀರ ಗಾಯ!

ತುಮಕೂರು: 5ಕ್ಕೂ ಹೆಚ್ಚು ಮಂದಿ ಮೇಲೆ ಹುಚ್ಚು ನಾಯಿ ದಾಳಿ ಮಾಡಿದ್ದು, ಓರ್ವ ಬಾಲಕಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ನಗರದ ಗೋಕುಲ ಬಡಾವಣೆಯಲ್ಲಿ ನಡೆದಿದೆ.
ಸಂಜೆ 5 ಗಂಟೆ ಸುಮಾರಿಗೆ ಗೋಕುಲ ಬಡಾವಣೆಯಲ್ಲಿ ಹುಚ್ಚುನಾಯಿಯೊಂದು ಮನೆ ಮುಂದೆ ಆಟವಾಡುತ್ತಿದ್ದ 9 ವರ್ಷ ಬಾಲಕಿ ಮೇಲೆ ದಾಳಿ ಮಾಡಿದೆ. ಬಾಲಕಿಯ ಕೈ, ಕಾಲಿಗೆ ಕಚ್ಚಿರುವ ಹುಚ್ಚುನಾಯಿ, ಸಾಕು ನಾಯಿಗಳ ಮೇಲೂ ದಾಳಿ ಮಾಡಿದೆ. ಈ ಹುಚ್ಚು ನಾಯಿಯಿಂದ ಕಡಿತಗೊಳಗಾದ ನಾಯಿಗಳಿಗೂ ಹುಚ್ಚು ಹರಡುವ ಸಂಭವ ಇರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ತುಮಕೂರು ಮಹಾನಗರ ಪಾಲಿಕೆ ಆಯುಕ್ತ ಬಿ‌.ವಿ. ಅಶ್ವಿಜಾ, ಗಾಯಗೊಂಡಿದ್ದ ಬಾಲಕಿಯ ಆರೋಗ್ಯ ವಿಚಾರಿಸಿದರು. ಪಾಲಿಕೆ ವತಿಯಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

Post a comment

No Reviews