2024-09-19 04:35:03

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಗೃಹಲಕ್ಷ್ಮಿ ಹಣ ಇಂದಿನಿಂದ ಜಮೆ: ಲಕ್ಷ್ಮಿಹೆಬ್ಬಾಳ್ಕರ್

ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ  ಲಕ್ಷೀ ಹೆಬ್ಬಾಳ್ಕರ್‌ ರವರು, ತಾಂತ್ರಿಕ ಕಾರಣದಿಂದ ಜೂನ್​ ಮತ್ತು ಜುಲೈ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ. ಇಂದಿನಿಂದ ಜೂನ್ ಮತ್ತು ಜುಲೈ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಮಹಿಳಾ ಸಬಲೀಕರಣ ಭಾಗವಾಗಿ ಕಾಂಗ್ರೆಸ್​ ಸರ್ಕಾರ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ಸರ್ಕಾರ ಮನೆಯ ಯಜಮಾನಿ ಖಾತೆಗೆ 2 ಸಾವಿರ ರೂ. ಜಮೆ ಮಾಡುತ್ತದೆ. ಕಳೆದ 10 ತಿಂಗಳಿಂದ ಹಣ ಜಮೆಯಾಗಿತ್ತು. ಆದರೆ ಜೂನ್​ ಮತ್ತು ಜುಲೈನ ಹಣ ಜಮಾವಣೆಗೊಂಡಿಲ್ಲ.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಏಪ್ರಿಲ್​​ ಮತ್ತು ಮೇ ತಿಂಗಳ ಹಣವನ್ನು ಒಮ್ಮೆಲೆ ಪಾವತಿ ಮಾಡಲಾಗಿತ್ತು. ಆದರೆ, ತಾಂತ್ರಿಕ ಕಾರಣಾಂತರಗಳಿಂದ ಜೂನ್​ ಮತ್ತು ಜುಲೈ ತಿಂಗಳ ಹಣ ಪಾವತಿ ಬಾಕಿ ಉಳಿದಿತ್ತು. ಈ ಹಣ ಇಂದು ಜಮಾವಣೆಯಾಗಲಿದೆ. ಗೃಹಲಕ್ಷ್ಮಿ ಹಣ ನೇರ ಲಾಭ ವರ್ಗಾವಣೆ (DBT) ಮೂಲಕ ಮನೆಯ ಯಜಮಾನಿ ಖಾತೆಗೆ ತಲಪುತ್ತದೆ. ಈಗಾಗಲೆ 10 ತಿಂಗಳ ಹಣ ನೀಡಲಾಗಿದೆ. ಒಟ್ಟು 20 ಸಾವಿರ ರೂ. ಫಲಾನುಭವಿಗಳ ಬ್ಯಾಂಕ್​ ಖಾತೆಗೆ ಜಮಾ ಮಾಡಲಾಗಿದೆ. ಇದೀಗ ಎರಡು ತಿಂಗಳ ಹಣ ಅಂದರೆ ಒಟ್ಟು 4 ಸಾವಿರ ರೂ. ಅನ್ನು ಫಲಾನುಭವಿಗಳ ಕೈ ಸೇರಲಿದೆ.

ಜೂನ್​ ಮತ್ತು ಜುಲೈ ತಿಂಗಳ ಹಣ ಜಮೆಯಾಗದಿದ್ದಕ್ಕೆ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಮಹಿಳೆಯರು ಇನ್ಮುಂದೆ ನಮಗೆ ಹಣ ಬರತ್ತೋ ಇಲ್ವೋ ಅಂತ ಚಿಂತಿತರಾಗಿದ್ದರು. ಆದರೆ ಇದೀಗ, ಈ ಚಿಂತೆ ದೂರವಾದಂತಾಗಿದೆ. ಎಂದು ಹೇಳಿದರು.

Post a comment

No Reviews