2024-09-19 04:33:56

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಡಿಕೆಶಿ ಗೆ  “ಸೀ.ಡಿ ಶಿವು” ಎಂದ ಹೆಚ್.ಡಿ.ಕೆ.

ಬೆಂಗಳೂರು: ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ನಾಶ ಮಾಡುವುದಕ್ಕೆ ಈ ಸರ್ಕಾರದಲ್ಲಿರುವ ʼಸೀ.ಡಿ ಶಿವುʼ ಸಂಚು ರೂಪಿಸಿರುವುದು ದೃಢಪಟ್ಟಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.
ಇಡೀ ಸಂಚಿನ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಾಯಿತಲ್ಲ, ಮೊಬೈಲ್‌ ಸಂಭಾಷಣೆಯಲ್ಲಿ ಎಲ್ಲವೂ ಬಯಲಾಗಿದೆ. ಡಿ.ಕೆ.ಶಿವಕುಮಾರ್, ಎಲ್.ಆರ್.‌ಶಿವರಾಮೇಗೌಡ, ದೇವರಾಜೇಗೌಡ ನಡುವಿನ ಸಂಭಾಷಣೆ ಆಡಿಯೋ ಲೀಕ್ ಆಗಿದೆ. ಸಂಚು ರೂಪಿಸಿರುವ ಶಿವರಾಮೇಗೌಡ, ಡಿ.ಕೆ.ಶಿವಕುಮಾರ್ ಮೇಲೆ ಕೂಡಲೇ ಪ್ರಕರಣ ದಾಖಲಿಸಿ, ವಿಚಾರಣೆಗೆ ಒಳಪಡಿಸಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಒತ್ತಾಯ ಮಾಡಿದರು.
ಸೀಡಿ ಶಿವು ಅವರು ಪೆನ್ʼಡ್ರೈವ್ ಗಳನ್ನು ಸೃಷ್ಟಿ ಮಾಡುವುದರಲ್ಲಿ ಇವರು ಎಕ್ಸ್ಪರ್ಟ್. ನಾನು ಬರೀ ಸಿನಿಮಾ ಹಂಚಿಕೆದಾರ. ಆದರೆ ಇವರ ಹಂಚಿಕೆಯೇ ಬೇರೆ‌. ಮೊದಲಿನಿಂದಲೂ ಅವರು ಅದನ್ನೇ ಮಾಡಿಕೊಂಡು ಬಂದವರು. ಅವರ ಪಕ್ಷದ ಶಾಸಕನೊಬ್ಬ, ಪೆನ್ʼಡ್ರೈವ್ ಗಳ ಹಿಂದೆ ದೊಡ್ಡ ತಿಮಿಂಗಿಲ ಇದೆ ಎಂದು ಹೇಳಿದ್ದರಲ್ಲವೇ? ನಾನೆಲ್ಲಿ ಹೇಳಿದ್ದೆ ಪರಮೇಶ್ವರ್‌ ಅವರೇ. SIT ತನಿಖೆ ಪಾರದರ್ಶಕವಾಗಿದ್ದರೆ ಇವರಿಬ್ಬರ ಮೇಲೆ ಕೇಸ್ ಹಾಕಿ ಎಂದು ಕುಮಾರಸ್ವಾಮಿ ಅವರು ಸವಾಲು ಹಾಕಿದರು.
ಮಾಧ್ಯಮಗಳು ಪ್ರಸಾರ ಮಾಡಿದ ಆಡಿಯೋವನ್ನು ನಾನೂ ಕೇಳಿದ್ದೇನೆ. ಯಾವ ದೇವರಾಜೇಗೌಡನ ಜೊತೆ ‌ಶಿವರಾಮೇಗೌಡ ಮಾತಾಡಿದ್ದ ಎಂದು ಗೊತ್ತಾಗಿದೆ. ಮೊದಲ ಆಡಿಯೋದಲ್ಲಿ ದೇವರಾಜೇಗೌಡ ಮಾತಾಡಿದ್ದಾರೆ. ಸದಾಶಿವ ನಗರದಲ್ಲಿ ವಾಸ ಇರುವವರು ಯಾರು? ಸದಾಶಿವ ನಗರದಲ್ಲಿ ವಾಸ ಇರುವುದು ಕುಮಾರಸ್ವಾಮೀನಾ? ʼಸೀಡಿ ಶಿವುʼನಾ? ಆ ದೇವರಾಜೇಗೌಡ ಜೊತೆ ಮಾತಾಡಿದ್ದು ʼಸೀಡಿ ಶಿವುʼ ತಾನೇ ಎಂದು ಮಾಜಿ ಸಿಎಂ ವಾಗ್ದಾಳಿ ನಡೆಸಿದರು.

Post a comment

No Reviews