2024-09-19 04:55:15

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಳಪೆ ಕಾಮಗಾರಿ ವಿರುದ್ಧ ಸಿಡಿದೆದ್ದು ಪಂಚಾಯ್ತಿ ಸದಸ್ಯತ್ವಕ್ಕೆ ರಾಜೀನಾಮೆ

ಬೀದರ್​: ವಾರ್ಡ್ ನಂ.1ರ ಸದಸ್ಯ ಸೋಮನಾಥ ಸ್ವಾಮಿ ಎಂಬುವವರು ಮುಧೋಳ ಗ್ರಾಮದಲ್ಲಿ ನಡೆಯುತ್ತಿರುವ ಕಳಪೆ ಗುಣಮಟ್ಟದ ಜೆಜೆಎಂ ಕಾಮಗಾರಿ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸದ ಹಿನ್ನೆಲೆ ಮನನೊಂದು ಕಳಪೆ ಕಾಮಗಾರಿ ವಿರುದ್ಧ ಸಿಡಿದೆದ್ದು ಗ್ರಾಮ ಪಂಚಾಯತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಪರೂಪದ ಘಟನೆಯೊಂದು ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ ಪಂಚಾಯತಿಯಲ್ಲಿ ನಡೆದಿದ್ದು, ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

3 ಕೋಟಿ 21 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಜೆಜೆಎಂ ಕಾಮಗಾರಿ ನಡೆಯುತ್ತಿದ್ದು, ಕಳಪೆ ಕಾಮಗಾರಿ ‌ಮಾಡುತ್ತಿರುವುದರಿಂದ ಕೆಲವು ‌ವಾರ್ಡ್​ಗಳಿಗೆ‌ ನೀರು ಬರುತ್ತಿಲ್ಲ. ಈ ಬಗ್ಗೆ ಎಲ್ಲಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸದಸ್ಯನ ಮನವಿಗೆ ಸ್ಪಂದನೆ ಸಿಗದ ಹಿನ್ನಲೆ ಗ್ರಾಮ ಪಂಚಾಯತಿ ‌ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ವ್ಯವಸ್ಥೆಯ ವಿರುದ್ಧ ಅಸಮಾಧಾನ ‌ವ್ಯಕ್ತಪಡಿಸಿದ್ದಾರೆ. ಇದಷ್ಟೇ ಅಲ್ಲ, ಈ ಹಿಂದೆ ರಾಜ್ಯದ ಶಾಸಕರಿಗೆ, ಸಚಿವರಿಗೆ ಸಂಬಳ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿ ವಿಜಯಪುರದಲ್ಲಿ MLC ಸುನೀಲ್ ಗೌಡ ಅವರು ಹೆಚ್ಚುವರಿ ಸಂಬಳ ನಿರಾಕರಿಸಿದ್ದರು.

Post a comment

No Reviews