
ಕಠ್ಮಂಡು: ಬುಧವಾರ ಮಧ್ಯಾಹ್ನ ನುವಾಕೋಟ್ನ ಶಿವಪುರಿ ಪ್ರದೇಶದಲ್ಲಿ ಏರ್ ಡೈನಾಸ್ಟಿಯ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈ ದುರಂತದಲ್ಲಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. ಎಂದು ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಹೆಲಿಕಾಪ್ಟರ್ ಕಠ್ಮಂಡುವಿನಿಂದ ರಾಸುವಾಗೆ ತೆರಳುತ್ತಿದ್ದಾಗ ನುವಾಕೋಟ್ ಜಿಲ್ಲೆಯ ಸೂರ್ಯ ಚೌರ್ -7ನಲ್ಲಿ ಬೆಟ್ಟಕ್ಕೆ ಡಿಕ್ಕಿ ಹೊಡೆದಿದೆ.
ಈ ಅಪಘಾತದ ಬಗ್ಗೆ ಮಾಹಿತಿ ಪಡೆದ ಕೂಡಲೇ ಅಧಿಕಾರಿಗಳು ರಕ್ಷಣಾ ತಂಡವನ್ನು ಸ್ಥಳಕ್ಕೆ ರವಾನಿಸಿದರು. ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಟಿಐಎ) ಮೂಲಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮವು ಹೆಲಿಕಾಪ್ಟರ್ ಮಧ್ಯಾಹ್ನ 1.54ಕ್ಕೆ ಕಠ್ಮಂಡುವಿನಿಂದ ಹೊರಟಿತ್ತು ಎಂದು ಹೇಳಿದೆ. ಸೂರ್ಯ ಚೌರ್ ತಲುಪಿದ ನಂತರ ಹೆಲಿಕಾಪ್ಟರ್ ಅಧಿಕಾರಿಗಳೊಂದಿಗೆ ಸಂಪರ್ಕ ಕಳೆದುಕೊಂಡಿತು.
ಹೆಲಿಕಾಪ್ಟರ್ ಕಠ್ಮಂಡುವಿನಿಂದ ಹೊರಟು ಸೈಫ್ರುಬೆನ್ಸಿಗೆ ತೆರಳುತ್ತಿತ್ತು. ಟೇಕಾಫ್ ಆದ ಮೂರು ನಿಮಿಷಗಳ ನಂತರ ಹೆಲಿಕಾಪ್ಟರ್ ಸಂಪರ್ಕ ಕಳೆದುಕೊಂಡಿತು ಎನ್ನಲಾಗಿದೆ. ಈ ಹೆಲಿಕಾಪ್ಟರ್ ಅನ್ನು ಹಿರಿಯ ಕ್ಯಾಪ್ಟನ್ ಅರುಣ್ ಮಲ್ಲಾ ಅವರು ಪೈಲಟ್ ಮಾಡುತ್ತಿದ್ದರು.
ಹೆಲಿಕಾಪ್ಟರ್ ಟೇಕಾಫ್ ಆಗುವಾಗ ಅದರಲ್ಲಿ ನಾಲ್ವರು ಚೀನಾದ ಪ್ರಜೆಗಳು ಮತ್ತು ಪೈಲಟ್ ಸೇರಿದಂತೆ ಒಟ್ಟು 5 ಮಂದಿ ಇದ್ದರು. ಚೀನಾದ ಪ್ರಜೆಗಳು ರಾಸುವಾಗೆ ತೆರಳುತ್ತಿದ್ದರು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
Tags:
Poll (Public Option)

Post a comment
Log in to write reviews