2024-09-19 09:15:56

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನಮ್ಮಲ್ಲಿ ಒಳಜಗಳ ಇದ್ದಿದ್ದರೆ ಲೋಕಸಭೆಗೆ ಒಗ್ಗಟ್ಟಾಗಿ ಕೆಲಸ ಮಾಡುತ್ತಿರಲಿಲ್ಲ: ಸಿ ಎಂ ಸಿದ್ದರಾಮಯ್ಯ

 

ಕಾಂಗ್ರೆಸ್‌ ಪಕ್ಷದಲ್ಲಿ ಒಳ ಜಗಳವಿದೆ ಎಂಬ ವಿರೋದ  ಪಕ್ಷಗಳ ಹೇಳಿಕೆಗೆ ಸಿ ಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರತಿಕ್ರಿಯಿಸಿದರು. ಈ ವೇಳೆ ಮಾತನಾಡಿದ ಅವರು  ನಮ್ಮಲ್ಲಿ ಒಳಜಗಳಇಲ್ಲ ಒಂದು ವೇಳೆ  ಜಗಳ ಇದ್ದಿದ್ದರೆ  ಲೋಕಸಭಾ  ಚುನಾವಣೆಯಲ್ಲಿ ಒಗ್ಗಟ್ಟಿನಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ  ಎಂದು ಹೇಳಿದರು.

ಮೈಸೂರಿನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾದಡಿದ ಅವರು. ವಿಧಾನ ಪರಿಷತ್ ಚುನಾವಣೆ ಕುರಿತು ಪ್ರತಿಕ್ರಿಯಿಸಿ, ಈ ಬಾರಿ ವಾತಾವರಣ ಉತ್ತಮವಾಗಿದೆ. ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿದೆ. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು ಎಂದರು.

ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್​ ಪ್ರಕರಣ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ ಎಂಬುದಕ್ಕೆ, ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರು. ಯಾವುದು ಸರಿ, ಯಾವುದು ತಪ್ಪು ಎನ್ನುವ ಬಗ್ಗೆ ಅರಿವು ಹೊಂದಿದವರು. ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದು ಹೇಳಿದರು.

ಹೆಚ್.ಡಿ.ಕುಮಾರಸ್ವಾಮಿ ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಪೆನ್ ಡ್ರೈವ್ ಇದ್ದು, ತನಿಖೆ ಮಾಡಿಸುವ ತಾಕತ್ತು ಸರ್ಕಾರಕ್ಕಿದೆ ಎಂದರೆ ಬಿಡುಗಡೆ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಕುಮಾರಸ್ವಾಮಿಯವರದ್ದು ಹಿಟ್ ಆ್ಯಂಡ್ ರನ್ ಕೇಸ್ ಎಂದು ವ್ಯಂಗ್ಯವಾಡಿದರು.

 

 

Post a comment

No Reviews