
ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ಕೊನೆಗೂ ಆರೋಪಿ ನಟ ದರ್ಶನ್ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಬಂಧನವಾಗಿ 102 ದಿನಗಳು ಕಳೆದಿವೆ. ಚಾರ್ಜ್ ಶೀಟ್ ಸಲ್ಲಿಕೆಯಾಗಿ ಎರಡು ವಾರಗಳು ಆಗಿದ್ದರೂ, ದರ್ಶನ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿರಲಿಲ್ಲ. ಇಂದು ಅರ್ಜಿ ಸಲ್ಲಿಕೆಯಾಗಿದೆ. ವಿಚರಣೆ ನಡೆಸಿದ ನ್ಯಾಯಾಧೀಶರು ಎಸ್ಪಿಪಿಗೆ ನೋಟಿಸ್ ಜಾರಿ ಮಾಡಿ ಇದೇ ಸೋಮವಾರಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಯಿತು.
Poll (Public Option)

Post a comment
Log in to write reviews