2024-09-19 05:04:03

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾಂಚನಜುಂಗಾ ರೈಲು ಅಪಘಾತ: ಮೃತರ ಕುಟುಂಬಕ್ಕೆ 2 ಲಕ್ಷ ರೂ.ಪರಿಹಾರ ಘೋಷಣೆ

ನವದೆಹಲಿ: ಕಾಂಚನಜುಂಗಾ ಎಕ್ಸ್ಪ್ರೆಸ್‌ ರೈಲು ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. 
ಪಶ್ಚಿಮ ಬಂಗಾಳದಲ್ಲಿ ನಡೆದ ರೈಲ್ವೆ ಅಪಘಾತ ದುಃಖ ವ್ಯಕ್ತಪಡಿಸಿರು ಪ್ರಧಾನಿ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ಸಂತ್ರಸ್ತರಿಗೆ ಸಹಾಯ ಮಾಡಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರೈಲ್ವೆ ಸಚಿವ ಅಶ್ವಿನಿವೈಷ್ಣವ್ ಅವರು ಅಪಘಾತದ ಸ್ಥಳಕ್ಕೆ ತೆರಳುತ್ತಿದ್ದಾರೆಂದು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಈ ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ನೈಸರ್ಗಿಕ ವಿಕೋಪ ಪರಿಹಾರ ನಿಧಿ (PMNRF) ಯಿಂದ ಮೃತರ ಕುಟುಂಬಕ್ಕೆ ತಲಾ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಪರಿಹಾರ ಘೋಷಣೆ ಮಾಡಿದ್ದಾರೆ. 

Post a comment

No Reviews