
ಮೈಸೂರು: ಅನಾರೋಗ್ಯದಿಂದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಪು ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ.
ಸಿಎಂ ಯಡಿಯೂರಪ್ಪ ಆಪ್ತರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ, ನಂತರ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾಗಿದ್ದರಲ್ಲದೆ ಬಿಜೆಪಿ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಲಿಂಗಸ್ವಾಮಿ ಅವರನ್ನು ಇತ್ತೀಚೆಗೆ ಯಡಿಯೂರಪ್ಪ ಹಾಗೂ ಸಂಸದ ವಿ.ಸೋಮಣ್ಣ ಮೈಸೂರಿನ ಆಸ್ಪತ್ರೆಯಲ್ಲಿಆರೋಗ್ಯ ವಿಚಾರಿಸಿದ್ದರು. ಚಿಕಿತ್ಸೆ ಫಲಿಸದೆ ಸಿದ್ದಲಿಂಗ ಸ್ವಾಮಿ ಅವರು ವಿಧಿವಶರಾಗಿದ್ದಾರೆ. ಸಂಜೆ 4 ಗಂಟೆಗೆ ನಂಜನಗೂಡಿನ ಸ್ವಗ್ರಾಮದಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿದೆ.
Poll (Public Option)

Post a comment
Log in to write reviews